
ಮೊಬೈಲ್ ಹ್ಯಾಕ್: ಬ್ಯಾಂಕ್ ಖಾತೆಯಿಂದ ಹಣ ಮಾಯ
ಕುಂದಾಪುರ: ವಂಡ್ಸೆಯ ನಿವಾಸಿಯೊಬ್ಬರಿಗೆ ಮೊಬೈಲ್ ಹ್ಯಾಕ್ ಮಾಡಿ ಬ್ಯಾಂಕ್ ಖಾತೆಯಿಂದ ಹಣವನ್ನು ಎಗರಿಸಿದ ಘಟನೆ ವರದಿಯಾಗಿದೆ.
ವಂಡ್ಸೆಯ ನಾರಾಯಣ ಶೆಟ್ಟಿ ಎಂಬವರೇ ಹೀಗೆ ಸೈಬರ್ ಖದೀಮರ ಜಾಲಕ್ಕೆ ಒಳಗಾದವರು. ಅವರಿಗೆ ಸೆ.17ರಂದು ಮೊಬೈಲ್ಗೆ ಬಂದ ಕರೆಯನ್ನು ಸ್ವೀಕರಿಸಿದಾಗ ರಾಹುಲ್ ಎಂಬಾತ ಹಿಂದಿಯಲ್ಲಿ ಮಾತನಾಡಿದ್ದ. ರಾಂಗ್ ನಂಬರ್ ಎಂದು ಕರೆ ಕಟ್ ಮಾಡಲಾಗಿತ್ತು.
ಬಳಿಕ ಮೊಬೈಲ್ ಗೆ ಓಟಿಪಿ ನಂಬ್ರವಿರುವ ಮೆಸೆಜ್ ಬಂದಿತ್ತು. ಅನುಮಾನಗೊಂಡು ಬ್ಯಾಂಕ್ ಖಾತೆ ಪರಿಶೀಲಿಸಿದಾಗ ಕೇವಲ 54ರೂ. ಇರುವುದಾಗಿ ಕಂಡುಬಂದಿದೆ. ಖಾತೆಯಲ್ಲಿದ್ದ 1.27ಲಕ್ಷ ಹಣದಲ್ಲಿ 54 ರೂ.ಬಿಟ್ಟು ಉಳಿದ ಹಣ ಖಾಲಿಯಾಗಿತ್ತು. ಹಣ ಬೇರೆಯವರ ಬ್ಯಾಂಕ್ ಖಾತೆಗೆ ವರ್ಗಾವಣೆಗೊಂಡಿತ್ತು. 1930 ನಂಬ್ರಕ್ಕೆ ಫೋನ್ ಮಾಡಿ ದೂರು ಸಲ್ಲಿಸಿದ ಬಳಿಕ 27,000 ರೂ. ಹಣ ಖಾತೆಗೆ ಮರು ಜಮೆಯಾಗಿದೆ.
ಎಸ್ ಡಿಸಿಸಿ ಬ್ಯಾಂಕ್ನಲ್ಲಿರುವ ತಂದೆಯವರ ಖಾತೆಗೆ ನನ್ನ ಮೊಬೈಲ್ ನಂಬ್ರ ಲಿಂಕ್ ಆಗಿದ್ದು ರಾಹುಲ್ ಹೆಸರಿನ ವ್ಯಕ್ತಿ 9008081056 ನಂಬ್ರದಿಂದ ಕರೆ ಮಾಡಿ ನನ್ನ ಮೊಬೈಲ್ ಹ್ಯಾಕ್ ಮಾಡಿ 1ಲಕ್ಷ ರೂ. ಹಣವನ್ನು ಮೋಸದಿಂದ ಲಪಟಾಯಿಸಿದ್ದಾನೆ ಎಂದು ಅರುಣ್ ಕುಮಾರ ಶೆಟ್ಟಿ ನೀಡಿದ ದೂರಿನಂತೆ ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.