
ಸೆ.22-26ರವರೆಗೆ ಮೂಡುಬಿದಿರೆಯಲ್ಲಿ 78ನೇ ದಸರಾ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವ
ಅವರು ಗುರುವಾರ ಸಂಜೆ ಸಮಾಜ ಮಂದಿರದ ಮೀಟಿಂಗ್ ಹಾಲ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದರು.
23 ರಂದು ಸಂಜೆ 7 ರಿಂದ ನ್ಯೂ ವೈಬ್ರೆಂಟ್ ಕಾಲೇಜಿನ ನಿರ್ದೇಶಕರಾದ ಚಂದ್ರಶೇಖರ ರಾಜೇ ಅರಸ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮಂಗಳೂರು ವಿ.ವಿ.ಕನ್ನಡ ವಿಭಾಗದ ಪ್ರಾಧ್ಯಾಪಕರಾದ ಡಾ.ಧನಂಜಯ ಕುಂಬ್ಳೆ ಅವರು ‘ ಭಾಷೆ ಮತ್ತು ಸಂಸ್ಕೃತಿ’ ಕುರಿತು ಉಪನ್ಯಾಸ ನೀಡಲಿದ್ದಾರೆ.
ಸಭಾ ಕಾರ್ಯಕ್ರಮದ ಬಳಿಕ ಮಯೂರ ಪ್ರತಿಷ್ಠಾನ, ಮಂಗಳೂರು ಇವರಿಂದ ಪಟ್ಲ ಸತೀಶ್ ಶೆಟ್ಟಿ ಅವರ ಸಾರಥ್ಯದಲ್ಲಿ, ರಕ್ಷಿತ್ ಪಡ್ರೆ ಅವರ ನಿರ್ದೇಶನದಲ್ಲಿ ‘ಪಾದ ಪ್ರತೀಕ್ಷಾ’ ಯಕ್ಷಗಾನ ಪ್ರದರ್ಶನ ನಡೆಯಲಿದೆ.
24 ರಂದು ಸಂಜೆ 7 ರಿಂದ ವರ್ಧಮಾನ ಪ್ರಶಸ್ತಿ ಪ್ರಧಾನ ನಡೆಯಲಿದ್ದು ಮೂಡುಬಿದಿರೆ ಜೈನಮಠದ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದಾರೆ. ವರ್ಧಮಾನ ಪ್ರಶಸ್ತಿ ಪೀಠದ ಅಧ್ಯಕ್ಷರಾದ ಎಸ್.ಡಿ.ಸಂಪತ್ ಸಾಮ್ರಾಜ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರೇಮಶೇಖರ ಉಡುಪಿ ಅವರಿಗೆ ವರ್ಧಮಾನ ಸಾಹಿತ್ಯ ಪ್ರಶಸ್ತಿ,ವಿಕಾಸ ಹೊಸಮನಿ ಹಾವೇರಿ ಅವರಿಗೆ ವರ್ಧಮಾನ ಉದಯೋನ್ಮುಖ ಸಾಹಿತ್ಯ ಪ್ರಶಸ್ತಿ ನೀಡಿ ಗೌರವಿಸಲಾಗುವುದು.ಬಳಿಕ ಸನಾತನ ನಾಟ್ಯಾಲಯ ಮಂಗಳೂರು ಇದರ ನಾಟ್ಯ ಕಲಾ ವಿದುಷಿ ಶಾರದಾ ಮಣಿಶೇಖರ್ ಅವರ ಮೂಡುಬಿದಿರೆ ಮತ್ತು ಮಂಗಳೂರಿನ ವಿದ್ಯಾರ್ಥಿಗಳಿಂದ ‘ ಸನಾತನ ನಾಟ್ಯಾಂಜಲಿ’ ನಡೆಯಲಿದೆ.
25 ರಂದು ಸಂಜೆ 7ರಿಂದ ಶಿವಪ್ರಸಾದ್ ಹೆಗ್ಡೆ ಕಣಜಾರು ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಎಕ್ಸಲೆಂಟ್ ಕಾಲೇಜಿನ ಆಡಳಿತನಿರ್ದೇಶಕರಾದ ಡಾ.ಬಿ.ಪಿ.ಸಂಪತ್ ಕುಮಾರ್ ಅವರು ‘ ಪಂಪನ ಕಾವ್ಯಗಳಲ್ಲಿ ಜೀವನ ದೃಷ್ಟಿ’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿರುವರು.ಬಳಿಕ ನಾಟ್ಯ ವಿದುಷಿ ಸುಖದಾ ಬರ್ವೆ ಅವರ ಶಿಷ್ಯರಿಂದ ‘ ನೃತ್ಯ ಸಿಂಚನ’ ನಡೆಯಲಿದೆ.
26 ರಂದು ಸಂಜೆ 7ರಿಂದ ಸಮಾರೋಪ ಸಮಾರಂಭ ನಡೆಯಲಿದ್ದು ಹಿರಿಯ ಲೆಕ್ಕ ಪರಿಶೋಧಕರಾದ ರಘುಪತಿ ಎಸ್.ಭಟ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ ಅವರು ‘ಉನ್ನತ ಶಿಕ್ಷಣದ ಸವಾಲುಗಳು ‘ ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ.
ಬಳಿಕ ಟಾಪ್ ಎಂಟರ್ಪ್ರೈಸಸ್ ಮೂಡುಬಿದಿರೆ ಅವರಿಂದ ರೂಪೇಶ್ ಕುಮಾರ್ ಅವರ ನಿರ್ದೇಶನದಲ್ಲಿ ‘ ನೃತ್ಯ ವೈವಿಧ್ಯ’ ಕಾರ್ಯಕ್ರಮ ಹಾಗೂ ಸಾಧಕರಿಗೆ ಸಮಾಜ ಮಂದಿರ ಗೌರವ ಪುರಸ್ಕಾರ ಕಾರ್ಯಕ್ರಮ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದರು.
ಸಮಾಜ ಮಂದಿರ ಸಭಾದ ಕಾರ್ಯದರ್ಶಿ ಸುರೇಶ್ ಪ್ರಭು, ಉಪಾಧ್ಯಕ್ಷ ಸಂಪತ್ ಸಾಮ್ರಾಜ್ಯ, ಜತೆ ಕಾರ್ಯದರ್ಶಿ ಕೆ.ಆರ್. ಪಂಡಿತ್, ಸದಸ್ಯರಾದ ಪಿ. ರಾಮ್ ಪ್ರಸಾದ್ ಭಟ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.