
ರಾಷ್ಟ್ರಮಟ್ಟದ ಭಾರತ್ ಸ್ಕೌಟ್ ಅಂಡ್ ಗೈಡ್ ಕಾರ್ಯಕ್ರಮ: ಸ್ಪೀಕರ್ ಭಾಗಿ
ಸ್ಪೀಕರ್ ಮಾತನಾಡಿ, ಉತ್ಸಾಹಿ, ಆತ್ಮವಿಶ್ವಾಸಿ ಮತ್ತು ದೃಢ ಮನಸ್ಸಿನ ಯುವ ಸಮಾವೇಶವನ್ನು ನೋಡಿ ನನಗೆ ಭವಿಷ್ಯದ ಭಾರತದ ಬಗ್ಗೆ ಅಪಾರ ಭರವಸೆ ಮತ್ತು ಹೆಮ್ಮೆ ಅನ್ನಿಸುತ್ತಿದೆ. ಏಕೆಂದರೆ, ನೀವು ಖಂಡಿತವಾಗಿಯೂ ವಿಶ್ವದಲ್ಲಿ ಹಿಂದೆಂದಿಗಿಂತಲೂ ಹೆಚ್ಚು ಬಲಿಷ್ಠ ಮತ್ತು ಪ್ರಗತಿಶೀಲ ರಾಷ್ಟ್ರವಾಗಿ ಮಾನ್ಯತೆ ಪಡೆಯಲಿರುವ ಶ್ರೇಷ್ಠ ಭಾರತದ ವಾಸ್ತುಶಿಲ್ಪಿಗಳಾಗಿದ್ದೀರಿ", ಎಂದರು.
ಕೇಂದ್ರ ಕಾರ್ಮಿಕ, ಉದ್ಯೋಗ ಮತ್ತು ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ, ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ನ ಮಾಜಿ ಮುಖ್ಯ ರಾಷ್ಟ್ರೀಯ ಆಯುಕ್ತ ಡಾ. ಕೆ.ಕೆ. ಖಂಡೇಲ್ವಾಲ್, ಛತ್ತೀಸಘಡದ ಮಾಜಿ ಮಾಜಿ ಸಚಿವ ಹಾಗೂ ಸಂಸದ ಬ್ರಿಜ್ ಮೋಹನ್ ಅಗರ್ವಾಲ್, ದೆಹಲಿ ಸಂಸದ ಮನೋಜ್ ತಿವಾರಿ, ಮಾಜಿ ನ್ಯಾಯಧೀಶರದ ಜಾವೇರಿಯ ಹಾಗೂ ಗೀತಾಂಜಲಿ, ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ನ ಹೆಚ್ಚುವರಿ ಸಹಾಯಕ ಆಯುಕ್ತ ಎಂ.ಎ ಖಾಲಿದ್, ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ನ ರಾಷ್ಟೀಯ ಮಹಾಕಾರ್ಯಾಧ್ಯಕ್ಷ ಪಿ.ಜಿ. ಆರ್. ಸಿಂಧ್ಯಾ ಮುಂತಾದ ನಾಯಕರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.