ಕನ್ನಡ ಜಾಗೃತಿ ಸಮಿತಿ: ರೆಹಮಾನ್ ಖಾನ್ ಕುಂಜತ್ತಬೈಲ್ ನಾಮ ನಿರ್ದೇಶನ ಸದಸ್ಯ

ಕನ್ನಡ ಜಾಗೃತಿ ಸಮಿತಿ: ರೆಹಮಾನ್ ಖಾನ್ ಕುಂಜತ್ತಬೈಲ್ ನಾಮ ನಿರ್ದೇಶನ ಸದಸ್ಯ


ಮಂಗಳೂರು: ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಕನ್ನಡ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಪ್ರತಿ ಮಹಾನಗರ ಪಾಲಿಕೆಯ ವ್ಯಾಪ್ತಿಯ ಕನ್ನಡ ಜಾಗೃತಿ ಸಮಿತಿ ರಚಿಸಿದ್ದು ಮಂಗಳೂರು ಮಹಾ ನಗರ ಪಾಲಿಕೆ ವ್ಯಾಪ್ತಿಯಲ್ಲಿ ರೆಹಮಾನ್ ಖಾನ್ ಕುಂಜತ್ತಬೈಲ್ ಅವರನ್ನು ಸದಸ್ಯರನ್ನಾಗಿ ನಾಮ ನಿರ್ದೇಶನ ಮಾಡಿದೆ.

ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ, ರಂಗ ಸ್ವರೂಪ (ರಿ) ಕುಂಜತ್ತಬೈಲ್ ತಂಡದ ಅಧ್ಯಕ್ಷರಾಗಿ, ಮರಕಡ ಸರಕಾರಿ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ, ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಉಪಾಧ್ಯಕ್ಷರಾಗಿ, ಕನ್ನಡ ನಾಡು ನುಡಿಯ ಬಗ್ಗೆ ಅಪಾರ ಪ್ರೀತಿ, ಶ್ರದ್ಧೆ ಹೊಂದಿದ್ದು ಕಲೆ, ಸಾಹಿತ್ಯ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸುತ್ತಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article