ಮಾನವ ಹಕ್ಕು ಅಯೋಗದ ಮೊರೆ ಹೋದ ತಿಮರೋಡಿ

ಮಾನವ ಹಕ್ಕು ಅಯೋಗದ ಮೊರೆ ಹೋದ ತಿಮರೋಡಿ

ಮಂಗಳೂರು: ಹೋರಾಟಗಾರ, ಹಿಂದುತ್ವದ ನಾಯಕ ಮಹೇಶ್ ಶೆಟ್ಟಿ ತಿಮರೋಡಿ ಅವರು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ (NHRC) ದೂರು ನೀಡಿದ್ದು, ಪೊಲೀಸರು ತಮ್ಮ ಮೇಲೆ ತೀವ್ರ ದೌರ್ಜನ್ಯ ಎಸಗುತ್ತಿದ್ದಾರೆ ಮತ್ತು ರಾಜಕೀಯ ಕಾರಣಗಳಿಗಾಗಿ ತಮ್ಮನ್ನು ಗುರಿಯಾಗಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ತಮ್ಮ ಮತ್ತು ತಮ್ಮ ಬೆಂಬಲಿಗರ ಮೇಲೆ ದಾಖಲಾಗಿರುವ ಎಲ್ಲಾ ಎಫ್‌ಐಆರ್ಗಳ ಬಗ್ಗೆ ಸ್ವತಂತ್ರ ತನಿಖೆ ನಡೆಸುವಂತೆ ಅವರು ಕೋರಿದ್ದು, ಪೊಲೀಸರು ರಾಜಕೀಯ ಒತ್ತಡಕ್ಕೆ ಮಣಿದು ಸುಳ್ಳು ಪ್ರಕರಣಗಳನ್ನು ಸೃಷ್ಟಿಸುತ್ತಿದ್ದಾರೆ ಎಂದು ದೂರಿದ್ದಾರೆ.

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ಕಳೆದ 13 ವರ್ಷಗಳಿಂದ ಹೋರಾಡುತ್ತಿರುವುದೇ ಈ ಕಿರುಕುಳಕ್ಕೆ ಕಾರಣ ಎಂದು ತಿಮರೋಡಿ ಹೇಳಿದ್ದಾರೆ. ಇತ್ತೀಚೆಗೆ ಧರ್ಮಸ್ಥಳದ ದೇವಸ್ಥಾನವೊಂದನ್ನು ಖಾಸಗಿ ವ್ಯಕ್ತಿಗಳಿಗೆ ವರ್ಗಾಯಿಸಿ, ಅದನ್ನು ಜೈನ ಸಂಸ್ಥೆ ಎಂದು ಹೇಳುತ್ತಿರುವುದನ್ನು ತಾವು ಪ್ರಶ್ನಿಸಿದ್ದೇ ಈಗಿನ ಸಮಸ್ಯೆಗಳಿಗೆ ಮೂಲ ಕಾರಣ. ಬಿಜೆಪಿ ನಾಯಕರ ಬೆಂಬಲದಿಂದ ಹೀಗೆ ಮಾಡಲಾಗುತ್ತಿದೆ ಎಂದು ತಾವು ನೀಡಿದ ಹೇಳಿಕೆಯನ್ನೇ ಮುಂದಿಟ್ಟುಕೊಂಡು, ತಮ್ಮ ಮೇಲೆ ಪ್ರಕರಣಗಳ ಸರಮಾಲೆ ಆರಂಭವಾಯಿತು ಎಂದು ಅವರು ವಿವರಿಸಿದ್ದಾರೆ.

ಆಗಸ್ಟ್ 16, 2025 ರಂದು ಬಿಜೆಪಿ ನಾಯಕ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ತಮ್ಮ ಮೇಲೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಯಿತು. ವಿಚಾರಣೆಗೆ ಹಾಜರಾಗಲು ೧೫ ದಿನಗಳ ಕಾಲಾವಕಾಶ ಕೇಳಿದ್ದರೂ, ಉತ್ತರ ನೀಡದೆ ಆಗಸ್ಟ್ 21 ರಂದು ಏಳು ಪೊಲೀಸ್ ಜೀಪ್‌ಗಳು ಮತ್ತು ಎರಡು ವ್ಯಾನ್‌ಗಳಲ್ಲಿ ಹಿರಿಯ ಅಧಿಕಾರಿಗಳು ತಮ್ಮ ಮನೆಗೆ ಬಂದಿದ್ದರು. ಇದು ಸಾರ್ವಜನಿಕವಾಗಿ ತಮಗೆ ಅವಮಾನ ಮಾಡುವ ಉದ್ದೇಶದಿಂದ ನಡೆಸಿದ ದಾಳಿಯಾಗಿತ್ತು ಎಂದವರು ಆರೋಪಿಸಿದ್ದಾರೆ.


Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article