ಶಿಕ್ಷಕರ ದಿನಾಚರಣೆ-ವಿದ್ಯಾರ್ಥಿಗಳ ಜೀವನದಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾದದು: ಡಾ. ಎಂ.ಬಿ. ಪುರಾಣಿಕ್
ಶೈಕ್ಷಣಿಕ ಸಮಿತಿಯ ಸದಸ್ಯ ಪ್ರೊ.ವಿನಯ್ ಕುಮಾರ್ ಅವರು ತಾವು ಶಿಕ್ಷಕರಾಗಿ ತಮ್ಮ ಅನುಭವಗಳನ್ನು ಹಂಚಿಕೊಂಡರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಎಕ್ಸ್ಪರ್ಟ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪ್ರೊ. ನರೇಂದ್ರ ಎಲ್. ನಾಯಕ್ ಅವರು ವಿದ್ಯಾರ್ಥಿಗಳ ಸರ್ವಾಂಗಿಣ ಬೆಳವಣಿಗೆಗೆ ಶಿಕ್ಷಕರ ಪಾತ್ರ ಮುಖ್ಯ. ನಮ್ಮ ಬದುಕಿನಲ್ಲಿ ಪ್ರತಿಯೊಂದು ಶಿಕ್ಷಕರನ್ನು ಸ್ಮರಿಸಬೇಕಾದದ್ದು ನಮ್ಮ ಆದ್ಯ ಕರ್ತವ್ಯ. ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ದುಡಿದರೆ ಯಶಸ್ಸು ಖಂಡಿತ ಎಂದರು.
ಎಕ್ಸ್ಪರ್ಟ್ ಶಿಕ್ಷಣ ಸಂಸ್ಥೆಯ ಟ್ರಸ್ಟಿ ಉಸ್ತಾದ್ ರಫೀಕ್ಖಾನ್, ಮಾಹಿತಿ-ತಂತ್ರಜ್ಞಾನ ವಿಭಾಗದ ನಿರ್ದೇಶಕರಾದ ಅಂಕುಶ್ ಎನ್.ನಾಯಕ್, ವಾಸ್ತುಶಿಲ್ಪ ತಜ್ಞೆಯಾದ ದೀಪಿಕಾ ಎ. ನಾಯಕ್, ಪ್ರಾಂಶುಪಾಲ ಪ್ರೊ. ರಾಮಚಂದ್ರಭಟ್, ಶೈಕ್ಷಣಿಕ ಸಮಿತಿಯ ಸದಸ್ಯ ಪ್ರೊ. ವಿನಯ್ ಕುಮಾರ್, ಕೋಚಿಂಗ್ ಮುಖ್ಯಸ್ಥ ಕರುಣಾಕರ ಬಳ್ಕೂರು, ಕೋಚಿಂಗ್ ಸಹಾಯಕ ಪ್ರಮೋದ್ ಕಿಣಿ ಮತ್ತಿತರರು ಉಪಸ್ಥಿತರಿದ್ದರು.
ಉಪನ್ಯಾಸಕ ವೃಂದದವರಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು. ಇದು ಕಾರ್ಯಕ್ರಮಕ್ಕೆ ಇನ್ನಷ್ಟು ಮೆರುಗನ್ನು ತಂದಿತು.
ದ್ವಿತೀಯ ಪಿ.ಯು.ಸಿ.ಯ ವಿದ್ಯಾರ್ಥಿಗಳಾದ ಧನ್ಯ ಮತ್ತು ದಮಾನಿ ಕಾರ್ಯಕ್ರಮವನ್ನು ನಿರೂಪಿಸಿದರು. ವಿದ್ಯಾರ್ಥಿ ಸಂಸತ್ತಿನ ಅಧ್ಯಕ್ಷೆ ಬ್ರಾಹ್ಮಿ ಮಯ್ಯ ಸ್ವಾಗತಿಸಿ, ಕಾರ್ಯದರ್ಶಿ ನಿಹಾರಿಕಾ ಆರ್. ವಂದಿಸಿದರು.



