ಪ್ರಜಾಪ್ರಭುತ್ವ ರಕ್ಷಣೆಯಿಂದ ದೇಶ ಸುಭದ್ರ: ಐವನ್ ಡಿಸೋಜಾ

ಪ್ರಜಾಪ್ರಭುತ್ವ ರಕ್ಷಣೆಯಿಂದ ದೇಶ ಸುಭದ್ರ: ಐವನ್ ಡಿಸೋಜಾ


ಮಂಗಳೂರು: ಎಲ್ಲರಿಗೂ ಸಮಾನ ಹಕ್ಕು ಮತ್ತು ಕರ್ತವ್ಯಗಳನ್ನು ನೀಡಿದ ಈ ದೇಶದ ಪ್ರಜಾಪ್ರಭುತ್ವವನ್ನು ಗೌರವಿಸಿ, ಅದರಂತೆ ನಡೆಯುವುದು ನಮ್ಮೆಲ್ಲರ ಆದ್ಯತೆಯಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಹೇಳಿದ್ದಾರೆ.

ಅವರು ಸೋಮವಾರ ನಗರದ  ಕುದ್ಮುಲ್ ರಂಗರಾವ್ ಪುರಭವನದಲ್ಲಿ  ನಡೆದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ  ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ನಾಗರಿಕರಿಗೆ ಸಾಮಾಜಿಕ, ಆರ್ಥಿಕ ಹಕ್ಕುಗಳನ್ನು ನೀಡುವ ಮೂಲಕ ಪ್ರತಿಯೊಬ್ಬ ಪ್ರಜೆಯ ಘನತೆ ಗೌರವವನ್ನು ಸಂವಿಧಾನವು ಎತ್ತಿ ಹಿಡಿದಿದೆ. ಈ ನಿಟ್ಟಿನಲ್ಲಿ ಪ್ರಜಾಪ್ರಭುತ್ವದ ಪ್ರತಿಯೊಂದು ಕರ್ತವ್ಯಗಳನ್ನು ಪಾಲಿಸಿಕೊಂಡು ದೇಶದ ಏಳಿಗೆಗೆ ಸಹಕರಿಸಬೇಕು ಎಂದು ಹೇಳಿದರು.

ಜಿಲ್ಲಾಧಿಕಾರಿ ಹೆಚ್.ವಿ ದರ್ಶನ್ ಅವರು ಸಂವಿಧಾನ ಪೀಠಿಕೆ ಬೋಧಿಸಿದರು.      

ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ್ ಕಾರ್ಬಾರಿ,  ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ  ಹೇಮಲತಾ  ಮತ್ತಿತರರು ಇದ್ದರು.

ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸುರೇಶ್ ಅಡಿಗ ಸ್ವಾಗತಿಸಿದರು.

ಇದೇ ಸಂದರ್ಭದಲ್ಲಿ ಕಳೆದ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯದ   ವಸತಿ ಶಾಲೆಗಳಲ್ಲಿ ಮೊದಲ ಸ್ಥಾನ ಪಡೆದ ಕೆಮ್ಮಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಪುಟ್ಟಸ್ವಾಮಿಯವರನ್ನು ಸನ್ಮಾನಿಸಲಾಯಿತು. 

ಅಂತರಾಷ್ಟ್ರೀಯ  ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ನವೆಂಬರ್ 26 ರಂದು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಲ್ಲಿ ನಡೆಯುವ ಚಿತ್ರಕಲೆ ಮತ್ತು  ಭಾಷಣ ಸ್ಪರ್ಧೆಗಳಿಗೆ ಚಾಲನೆ ನೀಡಲಾಯಿತು.      

ಸೈಕಲ್ ರ‍್ಯಾಲಿ

ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆ ಅಂಗವಾಗಿ ಜಿಲ್ಲಾ ಪಂಚಾಯತ್  ಕಚೇರಿಯಿಂದ ಪುರಭವನದವರೆಗೆ ನಡೆದ ಸೈಕಲ್ ರ‍್ಯಾಲಿಗೆ ಜಿಲ್ಲಾಧಿಕಾರಿಗಳು  ಹಸಿರು ನಿಶಾನೆ ತೋರಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article