ಬಾಲಕಾರ್ಮಿಕರ ಕುರಿತು ಅರಿವು ನೆರವು ಮೂಡಿಸುವುದು ಅಗತ್ಯ: ಜೈಬುನ್ನೀಸಾ

ಬಾಲಕಾರ್ಮಿಕರ ಕುರಿತು ಅರಿವು ನೆರವು ಮೂಡಿಸುವುದು ಅಗತ್ಯ: ಜೈಬುನ್ನೀಸಾ


ಮಂಗಳೂರು: ಮಕ್ಕಳನ್ನು ದೇವರ ರೂಪ ಎಂದು ಪರಿಗಣಿಸಲಾಗುತ್ತದೆ. ಆದರೆ ದು:ಖಕರ ಸಂಗತಿಯೆಂದರೆ ಅನೇಕರ ಬಾಲ್ಯವು ಶಿಕ್ಷಣ ಆಟ ಸಂಭ್ರಮದಿಂದ ತುಂಬಿರಬೇಕಾದ ಸಮಯದಲ್ಲಿ ಕಷ್ಟಪಟ್ಟು ಕೆಲಸ ಮಾಡುವುದರಲ್ಲಿ ಕಳೆಯುತ್ತಿದೆ. ಈ ದುಸ್ಥಿತಿ ತಡೆಯಲು  ಬಾಲಕಾರ್ಮಿಕರ ಕುರಿತು ಅರಿವು ನೆರವು ಮೂಡಿಸುವುದು ಅಗತ್ಯ ಎಂದು  ಜಿಲ್ಲಾ ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಬುನ್ನೀಸಾ  ಹೇಳಿದರು.

ಅವರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಪೊಲೀಸ್ ಇಲಾಖೆ, ಮಕ್ಕಳ ಸಹಾಯವಾಣಿ, ಡಾ. ಪಿ ದಯಾನಂದ ಪೈ-ಪಿ ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ  ಕಾಲೇಜು, ಕಾರ್ಸ್ಟ್ರೀಟ್ ಸಹಯೋಗದಲ್ಲಿ ನಡೆದ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986ರ ಪ್ರಸ್ತುತ ತಿದ್ದುಪಡಿ ಕಾಯ್ದೆ 2016ಕ್ಕೆ ಸಂಬಂಧಿಸಿದ ಪ್ರಾವಧಾನ, ಮಾನವ ಕಳ್ಳ ಸಾಗಾಣಿಕೆ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳು, ತಂಬಾಕು ನಿಯಂತ್ರಣ ಕಾಯ್ದೆ-2003 ರ ಬಗ್ಗೆ ಕಾನೂನು ಅರಿವು ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು.


ಮಂಗಳೂರು ವಿಭಾಗ ಸಹಾಯಕ ಕಾರ್ಮಿಕ ಆಯುಕ್ತೆ ನಾಜಿಯಾ ಸುಲ್ತಾನ ಮಾತನಾಡಿ, ಬಾಲಕಾರ್ಮಿಕ ನಿಯಂತ್ರಣ ಕಾಯ್ದೆಯ ಉದ್ದೇಶ ನಮ್ಮ ದೇಶದ ಪ್ರತಿಯೊಬ್ಬ ಮಕ್ಕಳಿಗೂ ಉಜ್ವಲ ಭವಿಷ್ಯ ಸಮಾನ ಹಕ್ಕುಗಳು ಮತ್ತು ಸಂತೋಷಕರ ಬಾಲ್ಯ ಒದಗಿಸುವುದಾಗಿದೆ ಎಂದು ಹೇಳಿದರು.

ಸಹಾಯಕ ಪೋಲಿಸ್ ಆಯುಕ್ತೆ ಗೀತಾ ಕುಲಕರ್ಣಿ  ಮಾದಕ ವಸ್ತುಗಳ  ದುಷ್ಪರಿಣಾಮ ಕುರಿತು, ಕಾರ್ಮಿಕ ಅಧಿಕಾರಿ ವಿಲ್ಮಾ ಎಲಿಜಬೆತ್ ತಾವ್ರೋ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಕಾಯ್ದೆ ಹಾಗೂ ತಂಬಾಕು ನಿಯಂತ್ರಣ ಘಟಕದ ಶೃತಿ ಉಪನ್ಯಾಸಗಳನ್ನು ನೀಡಿದರು. ಹಿರಿಯ ಕಾರ್ಮಿಕ ನಿರೀಕ್ಷಕಿ ಮೇರಿ ಪಿ ಡಯಾಸ್, ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥ ಡಾ. ನಿತಿನ್ ಎ ಚೊಲ್ವೇಕರ್ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article