ಆಳ್ವಾಸ್: ರಾಷ್ಟ್ರೀಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ಕಾರ್ಯಗಾರ
ಅವರು ಆಳ್ವಾಸ್ ಪದವಿಪೂರ್ವ ಕಾಲೇಜು ಆಯೋಜಿಸಿದ್ದ “ರಾಷ್ಟ್ರೀಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ಕಾರ್ಯಗಾರ”ದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಮತ್ತೋರ್ವ ಸಂಪನ್ಮೂಲ ವ್ಯಕ್ತಿ ಬೆಂಗಳೂರಿನ ಭಾರತೀಯ ವಿಜ್ಞಾನ ಕೇಂದ್ರದ ಸಂಶೋಧನಾ ವಿದ್ಯಾರ್ಥಿನಿ ಕಾವ್ಯಾ ಮಾತನಾಡಿ, ಸಮಯ ನಿರ್ವಹಣೆ ಜೀವನದಲ್ಲಿ ಅತೀ ಅಗತ್ಯ. ಸಮಯ ವ್ಯರ್ಥ ಮಾಡದೇ ಉಪಯುಕ್ತವಾಗಿ ಬಳಸುವುದು ತಯಾರಿ ಹಂತದಲ್ಲಿ ಬಹಳ ಅವಶ್ಯ. ಸಮಯವನ್ನು ಸರಿಯಾಗಿ ಬಳಸಿದರೆ, ಓದು ಹಾಗೂ ವಿಶ್ರಾಂತಿಯೊಂದಿಗೆ, ಸಮತೋಲಿತ ಜೀವನ ನಡೆಸಬಹುದು. ಜೊತೆಯಲ್ಲಿ ಯಾವ ಅಧ್ಯಾಯಕ್ಕೆ ಹೆಚ್ಚು ಗಮನ ಕೊಡಬೇಕು, ಯಾವ ರೀತಿಯ ಪ್ರಶ್ನೆಗಳು ಬರುವ ಸಾಧ್ಯತೆ ಇದೆ ಎಂಬುದರ ಕುರಿತಂತೆ ಒಂದು ಸ್ಪಷ್ಟ ಯೋಜನೆ ರೂಪಿಸಬೇಕು. ಯೋಜನೆ ಇಲ್ಲದಿದ್ದರೆ ಹೆಚ್ಚು ಶ್ರಮ ಪಟ್ಟರೂ ಫಲ ಪಡೆಯಲು ಸಾಧ್ಯವಿಲ್ಲ. ಯೋಗ, ವ್ಯಾಯಾಮ, ಧ್ಯಾನ, ಹವ್ಯಾಸಗಳ ಮೂಲಕ ಒತ್ತಡವನ್ನು ಕಡಿಮೆ ಮಾಡಬಹುದು. ಒತ್ತಡವನ್ನು ನಿಯಂತ್ರಣದಲ್ಲಿಟ್ಟಾಗ ಮಾತ್ರ ಮನಸ್ಸು ಶಾಂತವಾಗಿರುತ್ತದೆ ಮತ್ತು ಅಧ್ಯಯನ ಫಲಕಾರಿಯಾಗಬಲ್ಲದು ಎಂದರು.
ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲೆ ಜಾನ್ಸಿ ಪಿ. ಎನ್. ಮತ್ತು ಕಾರ್ಯಕ್ರಮ ಸಂಯೋಜಕಿ ರಮ್ಯಾ ರೈ ಉಪಸ್ಥಿತರಿದ್ದರು.
ಆಯನಾ ವಿ ರಮಣ್ ನಿರೂಪಿಸಿದರು. ಸುಪ್ರೀತ್ ವಂದಿಸಿದರು.
