ಶಿರ್ತಾಡಿಯಲ್ಲಿ ಸೀರೆ ಗೊಂಡೆ ಕೌಶಲ್ಯ ತರಬೇತಿ ಸಮಾರೋಪ ಸಮಾರಂಭ

ಶಿರ್ತಾಡಿಯಲ್ಲಿ ಸೀರೆ ಗೊಂಡೆ ಕೌಶಲ್ಯ ತರಬೇತಿ ಸಮಾರೋಪ ಸಮಾರಂಭ


ಮೂಡುಬಿದಿರೆ: ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು, ಬ್ಯಾಂಕ್ ಒಫ್ ಬರೋಡ ಮೂಡಬಿದ್ರಿ ಶಾಖೆ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ, ಶ್ರೀ ತುಳಸಿ ಸಂಜೀವಿನಿ ಒಕ್ಕೂಟ ಶಿರ್ತಾಡಿ  ಹಾಗೂ ಗ್ರಾಮ ಪಂಚಾಯತ್ ಶಿರ್ತಾಡಿ  ಇವರ ಜಂಟಿ ಆಶ್ರಯದಲ್ಲಿ 05 ದಿನಗಳ ಉಚಿತ ಸೀರೆ ಗೊಂಡೆ ಹಾಕುವ ಕೌಶಲ್ಯ ತರಬೇತಿಯ ಸಮಾರೋಪ ಸಮಾರಂಭ  ಶಿರ್ತಾಡಿ ಸಂಜೀವಿನಿ ಕಟ್ಟಡ ಸಭಾಂಗಣದಲ್ಲಿ ನಡೆಯಿತು.  ತರಬೇತಿ ನೀಡಿದ ಶುಭಲಕ್ಷ್ಮಿ ಮಾತನಾಡಿ, ತರಬೇತಿಯಲ್ಲಿ ಮಹಿಳೆಯರ  ಸಕ್ರಿಯ ಭಾಗವಹಿಸುವಿಕೆ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಇದರ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜ್ಯೋತಿ ರಾಜ್ ಇವರು ಮಾತಾಡುತ ಮಹಿಳೆಯರು ಸ್ವ ಉದ್ಯೋಗ ಮಾಡಲು ಹೆಚ್ಚಿನ ಕೌಶಲ್ಯದ ಅಗತ್ಯವಿದ್ದು ವಿಆರ್ ಎಲ್ ಡಿ ಮಹಿಳೆಯರಿಗೆ ಬೇಕಾದ ತರಬೇತಿ ಹಾಗೂ ಬೆಂಬಲ ನೀಡಲು ಸದಾ ಸಿದ್ದವಿದೆ ಎಂದು ತಿಳಿಸಿದರು.ಮೊದಲಿಗೆ  ತರಬೇತಿ ಪಡೆದ ಮಹಿಳೆಯರು ತರಬೇತಿ ಬಗ್ಗೆ ತಮ್ಮ ಅನಿಸಿಕೆ ತಿಳಿಸಿ ತರಬೇತಿಯಿಂದ ಪಡೆದ ಪ್ರಯೋಜನದ ಬಗ್ಗೆ ತಿಳಿಸಿದರು. 

ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲದ ಕಾರ್ಯಕ್ರಮ ವ್ಯವಸ್ತಾಪಕರಾದ ಜೀವನ್ ಕೊಲ್ಯ ಮಾತನಾಡಿ ತರಬೇತಿ ನಂತರ ಮಹಿಳೆಯರು ಸ್ವ ಉದ್ಯೋಗ ಮಾಡಲು ಕರೆ ನೀಡಿದರು. 

ಅಧ್ಯಕ್ಷತೆ ವಹಿಸಿದ ಶಿರ್ತಾಡಿ ಪಂಚಾಯತ್ ಅಧ್ಯಕ್ಷೆ ಅಗ್ನೇಶ್ ಡಿಸೋಜಾ ಮಾತನಾಡಿ ತರಬೇತಿಯಿಂದ ಮಹಿಳೆಯರಲ್ಲಿ ಸಕಾರಾತ್ಮಕ  ಬದಲಾವಣೆ ಬಂದಿದೆ, ಇನ್ನೂ ಹೆಚ್ಚಿನ ತರಬೇತಿ ಸಂಜೀವಿನಿ ಕಟ್ಟಡದಲ್ಲಿ ನಡೆದು ಹೆಚ್ಚಿನ ಮಹಿಳೆಯರಿಗೆ ಪ್ರಯೋಜನ ಸಿಗಲಿ ಎಂದರು. 

ಎನ್.ಆರ್.ಎಲ್.ಎಂ. ತಾಲೂಕು ಸಂಯೋಜಕರಾದ ನಿಖಿಲ್, ತುಳಸಿ ಒಕ್ಕೂಟದ ಅಧ್ಯಕ್ಷೆ ಸವಿತ ವೇದಿಕೆಯಲ್ಲಿದ್ದರು.

ಸುಗಂಧಿ ಸ್ವಾಗತಿಸಿದರು. ದಿವ್ಯ ಕಾರ್ಯಕ್ರಮ ನಿರೂಪಿಸಿದರು. ಜ್ಯೋತಿ ವಂದಿಸಿದರು.

5 ದಿನಗಳ ತರಬೇತಿಯನ್ನು ಯಶಸ್ವಿಯಾಗಿ ಪೂರೈಸಿದ ಮಹಿಳೆಯರಿಗೆ ಅತಿಥಿಗಳು ಪ್ರಮಾಣಪತ್ರ ನೀಡಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article