
ಹೆಗ್ಗಡೆ ಅವರು ತನ್ನ ಸ್ವಂತ ಬದುಕನ್ನು ಜನರ ಏಳಿಗೆಗೆ ಮೀಸಲಿಟ್ಟವರು: ಮೂಡುಬಿದಿರೆ ಶ್ರೀ
ಮೂಡುಬಿದಿರೆಯಲ್ಲಿ ಸಮಾನ ಮನಸ್ಕರ ಜನಾಗ್ರಹ ಸಭೆ
ಅವರು ಶ್ರೀ ಕ್ಷೇತ್ರ ಧಮ೯ಸ್ಥಳ ಮತ್ತು ಹೆಗ್ಗಡೆ ಅವರ ಮೇಲಿನ ಸುಳ್ಳು ಆರೋಪಗಳನ್ನು ಖಂಡಿಸಿ ಸತ್ಯವು ಆದಷ್ಟು ಶೀಘ್ರವಾಗಿ ಬಹಿರಂಗಗೊಳ್ಳಲಿ ಎಂದು ಆಗ್ರಹಿಸಿ ಪುಣ್ಯ ಕ್ಷೇತ್ರ ಸಂರಕ್ಷಣಾ ಸಮಿತಿ ಮೂಡುಬಿದಿರೆ ವತಿಯಿಂದ ಸ್ಕೌಟ್ &ಗೈಡ್ಸ್ ಕನ್ನಡ ಭವನದಲ್ಲಿ ಶನಿವಾರ ನಡೆದ ಸಮಾನ ಮನಸ್ಕರ ಜನಾಗ್ರಹ ಸಮಾವೇಶದಲ್ಲಿ ಆಶೀವ೯ಚನ ನೀಡಿದರು.
ಲೇಖಕ, ಖ್ಯಾತ ವಾಗ್ಮಿ ಮುನಿರಾಜ ರೆಂಜಾಳ ದಿಕ್ಸೂಚಿ ಭಾಷಣ ಮಾಡಿದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಪ್ರಾಸ್ತಾವಿಕವಾಗಿ ಮಾತನಾಡಿ, ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಡೆಯವರಿಂದ ಶಿಕ್ಷಣ, ಆರೋಗ್ಯ, ಸ್ವಸಹಾಯ, ಮದ್ಯವರ್ಜನ ಶಿಬಿರ, ಸಿರಿಧಾನ್ಯ ಸಂಸ್ಕರಣೆ, ಗ್ರಾಮಾಭಿವೃದ್ಧಿ ಯೋಜನೆ, ಲಕ್ಷಾಂತರ ಉದ್ಯೋಗ ಸೃಷ್ಟಿ, ಸಂಪೂರ್ಣ ಸುರಕ್ಷಾ ಆರೋಗ್ಯ ವಿಮೆ, ಗೌರವ ಶಿಕ್ಷಕ, ಶುದ್ದಗಂಗಾ ಯೋಜನೆ, ಹಿಂದೂ ರುದ್ರ ಭೂಮಿ ಅಭಿವೃದ್ಧಿ, ಭಜನಾ ಕಮ್ಮಟ, ದೇವಾಲಯಗಳ ಪುನರುವೃದ್ಡಿ ಸೇರಿದಂತೆ ಸಮಾಜಮುಖಿ ಕಾರ್ಯಕ್ರಮಗಳು, ಹಲವಾರು ಸಮ್ಮೇಳನಗಳು ನಡೆದಿವೆ. ಹೆಗ್ಗಡೆಯವರು, ಅವರ ಮನೆಯವರು, ದೇವಸ್ಥಾನಕ್ಕೂ ಬುರುಡೆ ಪ್ರಕರಣಗಳಿಗೂ ಏನು ಸಂಬಂಧ ಎಂಬುದನ್ನು ಸ್ಪಷ್ಟ ಪಡಿಸಬೇಕಾಗಿದೆ. ಅವರ ಸ್ಥಿತ ಪ್ರಜ್ಞೆಯ ಮನಸ್ಥಿತಿ ಸಮಾಜ ಮುಖಿ ಪ್ರಗತಿ ಕಾರ್ಯಗಳನ್ನು ತಿಳಿದುಕೊಳ್ಳಬೇಕಾಗಿದೆ ಎಂದರು.
ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಕನಾ೯ಟಕ ಪ್ರಾದೇಶಿಕ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾಯ೯ದಶಿ೯ ಮಿಥುನ್ ರೈ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.
ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಚೌಟರ ಅರಮನೆಯ ಕುಲದೀಪ ಎಂ., ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಎಂಸಿಎಸ್ ಬ್ಯಾಂಕಿನ ಅಧ್ಯಕ್ಷ ಬಾಹುಬಲಿ ಪ್ರಸಾದ್, ಪುರಸಭೆ ಮಾಜಿ ಅಧ್ಯಕ್ಷ ಪ್ರಸಾದ್ ಕುಮಾರ್, ಸದಸ್ಯ ಕೊರಗಪ್ಪ, ಬಿಜೆಪಿ ಮುಖಂಡರಾದ ಸುದರ್ಶನ್ ಎಂ., ಕೆ.ಪಿ. ಜಗದೀಶ್ ಅಧಿಕಾರಿ, ಕೃಷ್ಣರಾಜ ಹೆಗ್ಡೆ, ಕೆಎಂಎಫ್ ನಿರ್ದೇಶಕ ಕೆ.ಪಿ ಸುಚರಿತ ಶೆಟ್ಟಿ, ಉದ್ಯಮಿ ಕೆ.ಶ್ರೀಪತಿ ಭಟ್, ಬಸದಿಗಳ ಮೊಕ್ತೇಸರರಾದ ಪಟ್ನಶೆಟ್ಟಿ ಸುಧೇಶ್ ಕುಮಾರ್, ಆದರ್ಶ್ ಅರಮನೆ, ಪ್ರಮುಖರಾದ ಕೃಷ್ಣರಾಜ ಹೆಗ್ಡೆ, ಶ್ವೇತಾ ಜೈನ್, ಶಶಿಧರ್ ನಾಯಕ್, ಅಂಡಾರು ಗುಣಪಾಲ ಹೆಗ್ಡೆ, ಧನಕೀರ್ತಿ ಬಲಿಪ, ವಾಸುದೇವ ನಾಯಕ್, ಸಂಪತ್ ಸಾಮ್ರಾಜ್ಯ, ರಾಜವರ್ಮ ಬೈಲಂಗಡಿ, ಬೆಳುವಾಯಿ ಸೀತಾರಾಮ ಆಚಾರ್ಯ, ಧರಣೇಂದ್ರ ಕುಮಾರ್, ಅಮರ್ಕೋಟೆ, ಸುಭಾಶ್ಚಂದ್ರ ಚೌಟ ಮತ್ತಿತರರಿದ್ದರು.
ಅಂಡಾರು ಗುಣಪಾಲ ಹೆಗ್ಡೆ ಆಳ್ವಾಸ್ನ ಕನ್ನಡ ಉಪನ್ಯಾಸಕ ವೇಣುಗೋಪಾಲ ಶೆಟ್ಟಿ ಕಾಯ೯ಕ್ರಮ ನಿರೂಪಿಸಿ, ವಂದಿಸಿದರು.