ಆಳ್ವಾಸ್ ಎನ್ಎಸ್ಎಸ್ ಸ್ವಯಂಸೇವಕರಿಗೆ ವಿಶೇಷ ಉಪನ್ಯಾಸ
Wednesday, September 3, 2025
ಮೂಡುಬಿದಿರೆ: ಆಳ್ವಾಸ್ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ (ಪದವಿಪೂರ್ವ) ಸಹಯೋಗದಲ್ಲಿ ಎನ್ಎಸ್ಎಸ್ ಸ್ವಯಂಸೇವಕರಿಗೆ ವಿಶೇಷ ಉಪನ್ಯಾಸ ಕರ್ಯಕ್ರಮವನ್ನು ಡಾ. ಶಿವರಾಮ ಕಾರಂತ ವೇದಿಕೆಯಲ್ಲಿ ಆಯೋಜಿಸಲಾಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾತನಾಡಿದ ಡಾ. ಶಿವರಾಮ ಕಾರಂತ ಟ್ರಸ್ಟ್ನ ಅಧ್ಯಕ್ಷ ಡಾ. ಗಣನಾಥ ಶೆಟ್ಟಿ ಎಕ್ಕಾರು, ಎನ್ಎಸ್ಎಸ್ ಐವತ್ತು ವರ್ಷಗಳ ಸಮೃದ್ಧ ಇತಿಹಾಸದ ಮೂಲಕ, ಲಕ್ಷಾಂತರ ಯುವಕರಲ್ಲಿ ಸೇವಾ ಮನೋಭಾವವನ್ನು ಬೆಳೆಸಿದ ಮಹತ್ವದ ಚಳವಳಿ. ಎನ್ಎಸ್ಎಸ್ ಶಿಬಿರಗಳು ಶ್ರಮದಾನಕ್ಕೆ ಮಾತ್ರ ಸೀಮಿತವಲ್ಲ, ಶಿಸ್ತು, ಒಗ್ಗಟ್ಟು ಹಾಗೂ ಮಾನವೀಯತೆಯ ಪಾಠವನ್ನು ಕಲಿಸುತ್ತವೆ. ಶಿಬಿರಗಳಲ್ಲಿ ಸ್ತ್ರಿ-ಪುರುಷ, ಜಾತಿ-ಧರ್ಮ ಭೇದವಿಲ್ಲದೆ ಎಲ್ಲರೂ ಸಮಾನತೆಯ ಮನೋಭಾವದಿಂದ ಸೇವೆಯಲ್ಲಿ ತೊಡಗುವುದು, ಸಂವಿಧಾನದ ಸಮಾನತೆ ಮತ್ತು ಸಹಬಾಳ್ವೆಯ ಮೌಲ್ಯಗಳನ್ನು ಅಳವಡಿಸಿಕೊಂಡಂತೆ ಎಂದರು.
ಕಾಲೇಜಿನ ಕನ್ನಡ ಉಪನ್ಯಾಸಕರಾದ ಧರ್ಮೇಂದ್ರ ಕುದ್ರೊಳಿ ಅಧ್ಯಕ್ಷತೆವಹಿಸಿದರು.
ಎನ್ಎಸ್ಎಸ್ ಸಂಯೋಜನಾಧಿಕಾರಿ ಮೇಘನಾ ಇದ್ದರು. ವಿದ್ಯಾರ್ಥಿ ವಿಕಾಸ್ ಶೆಟ್ಟಿ ಸ್ವಾಗತಿಸಿ, ಶಟಸ್ಥಳ ವಂದಿಸಿದರು. ಸಂಖ್ಯಾಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರಭಾತ್ ಕಾರ್ಯಕ್ರಮ ನಿರೂಪಿಸಿದರು.