 
ಪತ್ರಕತ೯ ಬಿ.ಕೆ. ಅಶ್ರಫ್ ವಾಲ್ಪಾಡಿ ಸಹಿತ ಸಾಧಕರಿಗೆ ಸಮಾಜ ಮಂದಿರ ಗೌರವ ಪುರಸ್ಕಾರ ಪ್ರದಾನ
Friday, September 26, 2025
ಮೂಡುಬಿದಿರೆ: ಸಮಾಜ ಮಂದಿರಾ ಸಭಾ (ರಿ) ಮೂಡುಬಿದಿರೆ ಇದರ 78ನೇ ದಸರಾ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವದ ಸಮಾರೋಪ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಆರು ಮಂದಿಗೆ ಸಾಧಕರಾಗಿರುವ ಸಮಾಜ ಮಂದಿರ ಗೌರವ ಪುರಸ್ಕಾರ -2025' ನೀಡಿ ಗೌರವಿಸಲಾಯಿತು.
ಕಾಯ೯ಕ್ರಮದ ಅಧ್ಯಕ್ಷತೆ ವಹಿಸಿದ್ದ ರಘುಪತಿ ಎಸ್. ಭಟ್ ಅಧ್ಯಕ್ಷತೆಯಲ್ಲಿ ದಸರಾ ಉತ್ಸವದ ಅಧ್ಯಕ್ಷ ಕೆ.ಅಭಯಚಂದ್ರ ಜೈನ್ ಅವರ ನೇತೃತ್ವದಲ್ಲಿ
ಅಶ್ರಫ್ ವಾಲ್ಪಾಡಿ (ಕಲೆ, ಪತ್ರಿಕೋದ್ಯಮ), ಹೆರಾಲ್ಡ್ ತಾವ್ರೋ(ಸಂಗೀತ) ತಿಲಕ್ ಕುಲಾಲ್ (ಚಿತ್ರ ಕಲೆ) , ಪ್ರಕಾಶ್ ಅಮೀನ್ (ಯೋಗ ಸಂಸ್ಕೃತಿ), ರಾಜೇಶ್ ಒಂಟಿಕಟ್ಟೆ (ಕಲೆ) ರಾಜೇಶ್ ಆರ್. ಶ್ಯಾನುಭಾಗ್ (ಛಾಯಾಗ್ರಹಣ)ಅವರನ್ನು ಪುರಸ್ಕರಿಸಲಾಯಿತು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ, ದಸರಾ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವದ ಪದಾಧಿಕಾರಿಗಳು ಈ ಸಂದಭ೯ದಲ್ಲಿದ್ದರು.