
ಆಳ್ವಾಸ್ನಲ್ಲಿ ಪ್ರೊವಿನಿಯೋ-ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟನೆ
ಆಳ್ವಾಸ್ ಹೋಮಿಯೋಪಥಿ ವೈದ್ಯಕೀಯ ಕಾಲೇಜಿನ ವತಿಯಿಂದ ವಿದ್ಯಾಗಿರಿಯ ಮುಂಡ್ರುದೆಗುತ್ತು ಕೆ ಅಮರನಾಥ ಶೆಟ್ಟಿ ಕೃಷಿಸಿರಿ ವೇದಿಕೆಯಲ್ಲಿ ನಡೆಯುತ್ತಿರುವ 2 ದಿನಗಳ ಪ್ರೊವಿನಿಯೋ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಮಾತನಾಡಿ, ಆರೋಗ್ಯಕ್ಕೆ ಎದುರಾಗುವ ಸಮಸ್ಯೆಯನ್ನು ಹೋಗಲಾಡಿಸುವಲ್ಲಿ ವೈದ್ಯಕೀಯ ಕ್ಷೇತ್ರಗಳು ಉತ್ತಮ ಕಾರ್ಯ ನಿರ್ವಹಿಸುತ್ತಿವೆ. ಸ್ವಾತಂತ್ರ್ಯಪೂರ್ವ ಹಾಗೂ ಸ್ವಾತಂತ್ರ್ಯ ನಂತರದಲ್ಲಿ ಜನರ ಜೀವಿತದ ಸರಾಸರಿ ವರ್ಷಗಳು ಹೆಚ್ಚಾಗಿದೆ. ಜನರು ಮೂಢನಂಬಿಕೆಗಳಿಗೆ ಬಲಿಯಾಗದೆ, ವೈಜ್ಞಾನಿಕ ಮನೋಧರ್ಮದ ಮೂಲಕ ಹೋಮಿಯೋಪತಿಯನ್ನು ಬೆಳೆಸಿ ಎಂದು ಕರೆ ನೀಡಿದರು.
ಎರಡು ದಿನ ನಡೆಯಲಿರುವ ಈ ವಿಚಾರ ಸಂಕಿರಣದಲ್ಲಿ ಹೋಮಿಯೋಪಥಿ ಕ್ಷೇತ್ರದ ಪ್ರಮುಖ ಸಂಪನ್ಮೂಲ ವ್ಯಕ್ತಿಗಳಿಂದ ಉಪನ್ಯಾಸ ಹಾಗೂ ಸಂಶೋಧಕರಿಂದ ಪೇಪರ್ ಪ್ರೆಸೆಂಟೇಷನ್ ಇರಲಿವೆ ಎಂದರು.
ಆಳ್ವಾಸ್ ಹೋಮಿಯೋಪಥಿ ವೈದ್ಯಕೀಯ ಕಾಲೇಜಿನ ಮೆಡಿಕಲ್ ಕ್ಯಾಂಪ್ಗಳಿಗೆ ಸಹಕಾರ ನೀಡಿದ ಮೂಡುಬಿದಿರೆಯ ವಿವಿಧ ಸಮಾಜ ಸೇವಕರಾದ ಅಮರ್ ಕೋಟೆ, ಪುತ್ತಿಗೆ ಸೋಮನಾಥೇಶ್ವರ ದೇವಾಲಯದ ಅರ್ಚಕ ಅಡಿಗಳ್ ಅನಂತಕೃಷ್ಣ ಭಟ್, ಅಕ್ಷಯ್ ಜೈನ್, ಭಾರವಿ ಹಾಗೂ ಧರಣೇಂದ್ರ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡದ ಜಿಲ್ಲಾ ಆಯುಷ್ ಅಧಿಕಾರಿ ಡಾ. ಮೊಹಮ್ಮದ್ ಇಕ್ಬಾಲ್ ಕೆ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ, ಕಾಲೇಜಿನ ಆಡಳಿತಾಧಿಕಾರಿ ಡಾ. ಪ್ರಜ್ಞಾ ಆಳ್ವ, ಕಾಲೇಜಿನ ಪ್ರಾಂಶುಪಾಲ ಡಾ. ಹೆರಾಲ್ಡ್ ರೋಷನ್ ಪಿಂಟೋ, ಕಾರ್ಯಕ್ರಮ ಸಂಯೋಜಕಿ ಡಾ. ವಸುಮತಿ ಕೋಡಿಕಲ್ ಉಪಸ್ಥಿತರಿದ್ದರು.
ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ರಾಜೇಶ್ ಡಿಸೋಜ ಕಾರ್ಯಕ್ರಮ ನಿರ್ವಹಿಸಿದರು.