ಮೂಡುಬಿದಿರೆ ಮೆಸ್ಕಾಂ ಜನಸಂಪರ್ಕ ಸಭೆ: ಸಿಬಂದಿಗಳ ಕೊರತೆ ನೀಗಿಸಲು ಆಗ್ರಹ

ಮೂಡುಬಿದಿರೆ ಮೆಸ್ಕಾಂ ಜನಸಂಪರ್ಕ ಸಭೆ: ಸಿಬಂದಿಗಳ ಕೊರತೆ ನೀಗಿಸಲು ಆಗ್ರಹ


ಮೂಡುಬಿದಿರೆ: ತಾಲೂಕಿನ ಬೆಳುವಾಯಿ ಮತ್ತು ಮೂಡುಬಿದಿರೆಯಲ್ಲಿ ಮೆಸ್ಕಾಂ ಕಚೇರಿಯಲ್ಲಿರುವ ಸಿಬಂದಿಗಳ ಕೊರತೆಯನ್ನು ನೀಗಿಸುವಂತೆ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ ಆಗ್ರಹಿಸಿದ್ದಾರೆ.

ಅವರು ಮಂಗಳವಾರ ಮೂಡುಬಿದಿರೆ ಮೆಸ್ಕಾಂ ಕಛೇರಿಯಲ್ಲಿ ನಡೆದ ಜನ ಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು ಶಿತಾ೯ಡಿಯಲ್ಲಿ ಮೆಸ್ಕಾಂ ಉಪಕೇಂದ್ರವನ್ನು ಮಾಡಲಾಗಿದೆ ಆದರೆ ಅವಶ್ಯಕವಾಗಿರುವ ಸಿಬಂದಿಗಳನ್ನು ನೇಮಿಸುತ್ತಿಲ್ಲವೆಂದು ಆರೋಪಿದರು.  


ಮೂಡುಬಿದಿರೆ ಕೈಗಾರಿಕಾ ವಲಯದ ಉದ್ಯಮಿಗಳ ಪರವಾಗಿ ಮಾತನಾಡಿದ ಉದ್ಯಮಿ ಬೆನ್ನಿ ಮ್ಯಾಥ್ಯೂ  ನಿರಂತರ ವಿದ್ಯುತ್ ವ್ಯತ್ಯಯದಿಂದಾಗಿ  ಕೈಗಾರಿಕಾ ವಲಯದಲ್ಲಿ ಕಾರ್ಯನಿರ್ವಹಿಸುವ ಕೈಗಾರಿಕೆಗಳಿಗೆ ಬಹಳ ಸಮಸ್ಯೆಯಾಗಿದೆ ಎಂದರು. ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ವೇಳೆ ಕೇಬಲ್ ಅವನ್ನು ಹೆದ್ದಾರಿಯ ಒಳಗಡೆ ಹೂತು ಕಾಮಗಾರಿ ಮಾಡಲಾಗಿದ್ದು ಈ ಕೇಬಲ್ ನಿರಂತರ ತೊಂದರೆ ನೀಡುತ್ತಿದ್ದು, ಮುಂದೆ ಏನಾದರೂ ಸಮಸ್ಯೆಯಾದಾಗ ಹೆದ್ದಾರಿಯನ್ನೇ ಅಗೆಯಬೇಕಾಗುತ್ತದೆ. ಇದಕ್ಕಾಗಿ ಸೂಕ್ತ ವ್ಯವಸ್ಥೆ ಮಾಡುವಂತೆ ರಾಜೇಶ್ ಕಡಲಕೆರೆ ಆಗ್ರಹಿಸಿದರು.

ಶಿರ್ತಾಡಿ ಸಬ್‌ಸ್ಟೇಶನ್ ಕಾರ್ಯಾಚರಿಸಲು ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಮಾಜಿ ತಾಲೂಕು ಪಂಚಾಯತ್ ಸದಸ್ಯ ರುಕ್ಕಯ್ಯ ಪೂಜಾರಿ ಅವರು ಆಗ್ರಹಿಸಿದ್ದು, ಶೀಘ್ರದಲ್ಲೇ ಕಾಯಾ೯ರಂಭಿಸುವ ಭರವಸೆ ನೀಡಲಾಯಿತು.

ಮೂಡುಬಿದಿರೆಯಲ್ಲಿ ಸುಮಾರು 55 ಸಾವಿರ ವಿದ್ಯುತ್ ಸಂಪರ್ಕಗಳಿದ್ದು ಇವುಗಳ ನಿರ್ವಹಣೆಯನ್ನು ಕೇವಲ 42 ಸಿಬ್ಬಂದಿಗಳು ಮಾಡಬೇಕಿದೆ. ಇದರಿಂದ ತಾಕೊಡೆಯಂತಹ ಗ್ರಾಮಾಂತರ ಪ್ರದೇಶಗಳಲ್ಲಿ 36 ತಾಸುಗಳಿಗೂ ಹೆಚ್ಚುಕಾಲ ವಿದ್ಯುತ್ ಇಲ್ಲದ ಸ್ಥಿತಿ ನಿರ್ಮಾಣವಾಗುತ್ತದೆ. ಮೆಸ್ಕಾಂ ಸಹಾಯವಾಣಿಯೂ ಸೂಕ್ತವಾಗಿ ಕರ‍್ಯನಿರ್ವಹಿಸುತ್ತಿಲ್ಲ, ವಾಟ್ಸಪ್ ಮೂಲಕ ನೀಡಿದ ದೂರುಗಳಿಗೆ ಹಲವು ಗಂಟೆಗಳಾದರೂ ಸ್ಪಂದನೆ ಸಿಗುತ್ತಿಲ್ಲ ಎಂದು ಜೈಸನ್ ತಾಕೊಡೆ ಅಧಿಕಾರಿಗಳ ಗಮನಕ್ಕೆ ತಂದರು.

ಮೆಸ್ಕಾಂ ಎಕ್ಸಿಕ್ಯೂಟಿವ್ ಇಂಜಿನಿಯರ್ ಸಂತೋಷ್ ಕುಮಾರ್, ಅಧೀಕ್ಷಕ ಇಂಜಿನಿಯರ್ ಕೃಷ್ಣರಾಜ್, ಸಹಾಯಕ ಕಾರ್ಯನಿರ್ವಹಕ ಇಂಜಿನಿಯರ್ ಮೋಹನ್, ಶಾಖಾಧಿಕಾರಿ ಪ್ರವೀಣ್, ವಿವಿಧ ವಿಭಾಗಳ ಶಾಖಾಧಿಕಾರಿಗಳು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article