ವಿದ್ಯಾರ್ಥಿಗಳಿಂದಲೇ ಅರೆಭಾಷೆ ಸಂಸ್ಕೃತಿ ಹಾಗೂ ಸಾಹಿತ್ಯಕ್ಕೆ ಪ್ರೋತ್ಸಾಹ ಸಿಗಲಿ: ಸದಾನಂದ ಮಾವಜಿ
ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನ ಬೆಳ್ಳಿ ಹಬ್ಬ ಸಭಾಂಗಣದಲ್ಲಿ ಮಂಗಳವಾರ ಜರಗಿದ ದಕ್ಷಿಣ ಕನ್ನಡ ಜಿಲ್ಲಾ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘಗಳ ಸಮ್ಮಿಲನ ಹಾಗೂ ಸ್ಪರ್ಧೆಗಳನ್ನು ಆಯೋಜಿಸಿ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕರ್ನಾಟಕ ರಾಜ್ಯ ಸಂಸ್ಕೃತಿ ಹಾಗೂ ಸಾಹಿತ್ಯ ಅಕಾಡೆಮಿ ವತಿಯಿಂದ ವಿದ್ಯಾರ್ಥಿಗಳಿಗಾಗಿ ಕಳೆದ ಐದು ವರ್ಷಗಳಿಂದ ಅರೆ ಭಾಷೆ ಸಂಸ್ಕೃತಿ ಹಾಗೂ ಸಾಹಿತ್ಯದ ಬಗ್ಗೆ ಬೇರೆ ಬೇರೆ ಕಡೆಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದ್ದೇವೆ. ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜು ವಿದ್ಯಾರ್ಥಿಗಳನ್ನು ಒಟ್ಟು ಸೇರಿಸಿ ಅವರಿಗೆ ವಾರ್ತೆ ಹಾಗೂ ಸಂಸ್ಕೃತಿಯನ್ನು ಉಣ ಬಡಿಸಿದಾಗ ಅದು ಮುಂದಿನ ತಲೆಮಾರಿನವರೆಗೂ ನಿರಂತರವಾಗಿ ಸಾಗಲು ಪ್ರೇರೇಪಣೆಯಾಗುತ್ತದೆ ಎಂದರು.
ಕಾರ್ಯಕ್ರಮವನ್ನು ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಶಿವರಾಮ ಏನಕಲ್ ಉದ್ಘಾಟಿಸಿದರು.
ಸುಬ್ರಹ್ಮಣ್ಯ ಗ್ರಾಮ ಗೌಡ ಸಮಿತಿ ಅಧ್ಯಕ್ಷ ಡಾ. ಎ.ಎ. ತಿಲಕ್, ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನ ಶಿಕ್ಷಕರಕ್ಷಕ ಸಂಘದ ಅಧ್ಯಕ್ಷೆ ತ್ರಿವೇಣಿ ದಾಮ್ಲೆ, ಕಾಲೇಜಿನ ಪ್ರಾಂಶುಪಾಲ ಸೋಮಶೇಖರ ನಾಯಕ, ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಸದಸ್ಯರುಗಳಾದ ಕಾರ್ಯಪ್ಪ ಪಿ.ಎಸ್., ಚಂದ್ರಶೇಖರ ಪೇರಾಲು, ಲೋಕೇಶ್ ಊರುಬೈಲು, ವಿನೋದ್ ಮೂಡಗದ್ದೆ, ಲತಾ ಪ್ರಸಾದ್ ಕುತ್ಪಾಜೆ, ಹಾಗೂ ಚಂದ್ರಾವತಿ ಬಡ್ಡೆಡ್ಕ ಉಪಸ್ಥಿತರಿದ್ದರು.
ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಸೌಮ್ಯ ದಿನೇಶ್ ಕಾರ್ಯಕ್ರಮ ನಿರೂಪಿಸಿದರು. ಚಂದ್ರಶೇಖರ ಪೆರಾಲು ಸ್ವಾಗತಿಸಿ, ಲೋಕೇಶ್ ಊರುಬೈಲು ವಂದಿಸಿದರು.