
ಧರ್ಮಸ್ಥಳದಲ್ಲಿ ಇಪ್ಪತ್ತೇಳನೇ ವರ್ಷದ ಭಜನಾ ಕಮ್ಮಟ: 23 ಶ್ರೇಷ್ಠ ಭಜನಾ ಮಂಡಳಿಗಳಿಗೆ ‘ಸಾಧಕ ಪ್ರಶಸ್ತಿ’ ಪ್ರದಾನ
ಭಜನೆ ಮಾಡುವಾಗ ಪರಿಶುದ್ಧ ತನು, ಮನದಿಂದ ದೃಢಸಂಕಲ್ಪದೊಂದಿಗೆ ಯಾವುದೇ ರೀತಿಯ ಚಿಂತೆ, ಸಂಕೋಚ ಇಲ್ಲದೆ ಭಕ್ತಿ ಹಾಗೂ ಉತ್ಸಾಹದಿಂದ ಮಾಡಬೇಕು ಎಂದು ಅವರು ಸಲಹೆ ನೀಡಿದರು.
ವಿಶೇಷವಾಗಿ ಭಜನೆಯಲ್ಲಿ ಪುಟ್ಟಮಕ್ಕಳ ಪ್ರತಿಭೆ, ಆಸಕ್ತಿ ಮತ್ತು ಉತ್ಸಾಹವನ್ನು ಅವರು ಶ್ಲಾಘಿಸಿದರು.
ಭಜನಾ ಪರಿಷತ್ನ ಅಧ್ಯಕ್ಷರಾದ ಚಂದ್ರಶೇಖರ ಸಾಲಿಯಾನ್ ಮತ್ತು ಉಪಾಧ್ಯಕ್ಷ ರಾಜೇಂದ್ರ ಕುಮಾರ್ ಬಸ್ರೂರು ಹಾಗೂ ಎಲ್ಲಾ ಪದಾಧಿಕಾರಿಗಳ ಸೇವೆಯನ್ನು ಹೆಗ್ಗಡೆಯವರು ಶ್ಲಾಘಿಸಿದರು.
ಹೇಮಾವತಿ ವೀ. ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು.
ಮಾಣಿಲದ ಮೋಹನದಾಸ ಸ್ವಾಮೀಜಿ ಮತ್ತು ಭಜನಾ ಪರಿಷತ್ನ ಅಧ್ಯಕ್ಷರಾದ ಚಂದ್ರಶೇಖರ ಸಾಲಿಯಾನ್ ಇದ್ದರು.
ಭಜನಾ ಕಮ್ಮಟದ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್ ಪ್ರಾಸ್ತಾವಿಕವಾಗಿ ಮಾತನಾಡಿ ಭಜನಾ ಮಂಡಳಿಗಳ ಸೇವೆ, ಸಾಧನೆಯನ್ನು ಸಾದರಪಡಿಸಿದರು.
ಭಜನಾ ಕಮ್ಮಟದ ಕಾರ್ಯದರ್ಶಿ ಎ.ವಿ. ಶೆಟ್ಟಿ ಸ್ವಾಗತಿಸಿ ಭಜನಾ ಪರಿಷತ್ನ ಉಪಾಧ್ಯಕ್ಷ ರಾಜೇಂದ್ರ ಕುಮಾರ್ ಬಸ್ರೂರು ವಂದಿಸಿದರು. ವಕೀಲ ಕೇಶವ ಗೌಡ ಕಾರ್ಯಕ್ರಮ ನಿರ್ವಹಿಸಿದರು.