ಧರ್ಮಸ್ಥಳದಲ್ಲಿ ಗಿರಿಜಾ ಕಲ್ಯಾಣ ಮಹೋತ್ಸವ

ಧರ್ಮಸ್ಥಳದಲ್ಲಿ ಗಿರಿಜಾ ಕಲ್ಯಾಣ ಮಹೋತ್ಸವ


ಉಜಿರೆ: ಬೆಂಗಳೂರಿನ ಅಖಿಲ ಕರ್ನಾಟಕ ಬ್ರಾಹ್ಮಣ ಯುವಕರ ಸಂಘ ಮತ್ತು ‘ನಮ್ಮ ಸಂಕಲ್ಪ ಪ್ರತಿಷ್ಠಾನ’ದ ಆಶ್ರಯದಲ್ಲಿ ಸೋಮವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ಲೋಕಕಲ್ಯಾಣಾರ್ಥವಾಗಿ 108 ದಂಪತಿಗಳಿಂದ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಗಿರಿಜಾಕಲ್ಯಾಣ ಮಹೋತ್ಸವ ನಡೆಯಿತು.


ಸುಪ್ರಭಾತ, ಗಣಪತಿ ಪೂಜೆ, ದೇವನಾಂದಿ, ಕಂಕಣಧಾರಣೆ, ಗೋ ಪೂಜೆ, ಗಜ ಪೂಜೆ, ಸಾಮೂಹಿಕ ಶಿವಪೂಜೆ, ಅಷ್ಟಾವಧಾನ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆದವು.


ಮಹರ್ಷಿ ಆನಂದ ಗುರೂಜಿ ಶುಭಾಶಂಸನೆ ಮಾಡಿ ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆದ ಈ ಪವಿತ್ರ ಕಾರ್ಯಕ್ರಮದಿಂದ ಸಮಾಜದ ಆಪತ್ತುಗಳೆಲ್ಲ ನಿವಾರಣೆಯಾಗಿ ಸುಖ-ಶಾಂತಿ, ನೆಮ್ಮದಿ ನೆಲೆಸಲೆಂದು ಹಾರೈಸಿದರು.


ಆನಂದ ಗುರೂಜಿಯವರ ನೇತೃತ್ವದಲ್ಲಿ ವಿಶ್ವಶಾಂತಿಗಾಗಿ ಸಾಮೂಹಿಕ ಶಿವಪಂಚಾಕ್ಷರಿ ಪಠಣ ಮಾಡಲಾಯಿತು.


ಭಕ್ತಿಗೀತೆಗಳ ಗಾಯನ, ನೃತ್ಯಪ್ರದರ್ಶನ ಮೊದಲಾದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.




















Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article