ಪೆರುವಾಯಿ ಗ್ರಾ.ಪಂ ಅಧ್ಯಕ್ಷೆ ಮತ್ತು ಬಿಲ್ ಕಲೆಕ್ಟರ್ ಲೋಕಾ ಬಲೆಗೆ

ಪೆರುವಾಯಿ ಗ್ರಾ.ಪಂ ಅಧ್ಯಕ್ಷೆ ಮತ್ತು ಬಿಲ್ ಕಲೆಕ್ಟರ್ ಲೋಕಾ ಬಲೆಗೆ


ವಿಟ್ಲ: ಲಂಚ ಸ್ವೀಕರಿಸುತ್ತಿದ್ದಾಗ ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಮತ್ತು ಬಿಲ್ ಕಲೆಕ್ಟರ್ ಮಂಗಳೂರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಶನಿವಾರ ಸಂಜೆ ಸಂಭವಿಸಿದೆ.

ಪ್ರಕರಣ: ಪೆರುವಾಯಿ ಗ್ರಾಮ ಪಂಚಾಯತ್‌ಗೆ ಸರ್ಕಾರದ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿಯಲ್ಲಿ ತಮ್ಮ ಜಾಗಕ್ಕೂ ಒಂದು ಕೊಳವೆ ಬಾವಿಯನ್ನು ಮಾಡಿಕೊಡಲು 2024ರಲ್ಲಿ ಪೆರುವಾಯಿ ಗ್ರಾಮ ಪಂಚಾಯತ್ ಅವರಿಗೆ ಫಲಾನುಭವಿಯೊಬ್ಬರು ಅರ್ಜಿ ಸಲ್ಲಿಸಿದ್ದಾರೆ. ಪೆರುವಾಯಿ ಗ್ರಾಮ ಪಂಚಾಯತ್ ಕಚೇರಿಗೆ ಎರಡು ಮೂರು ಬಾರಿ ಹೋಗಿ ವಿಚಾರಿಸಿದರೂ ಸರಿಯಾಗಿ ಪ್ರತಿಕ್ರಿಯೆ ನೀಡಿರುವುದಿಲ್ಲ. ಬಳಿಕ ‘ನಿಮಗೆ ಬೋರ್‌ವೆಲ್ ಫ್ರೀ ಆಗುತ್ತದೆ, ಬೆಂಗಳೂರು ಆಫೀಸ್‌ಗೆ ಹತ್ತು ಸಾವಿರ ಕೊಡ್ಲಿಕ್ಕೆ ಇದೆ, ಹಣ ಕೊಟ್ಟರೆ ಅವರು ಪಾಸ್ ಮಾಡುತ್ತಾರೆ. ತಾನು ಬೆಂಗಳೂರಿಗೆ ಹೋಗಿ ನಿಮ್ಮ ಕೆಲಸ ಮಾಡಿಸುತ್ತೇನೆ, ಹಣ ತಗೊಂಡು ಬನ್ನಿ, ನೀವು ಹಣ ಕೊಟ್ಟರೆ ಬೋರ್‌ವೆಲ್ ಪಾಸ್ ಮಾಡಿಸಿ ಕೊಡುತ್ತೇನೆ’ ಎಂದು ಅಧ್ಯಕ್ಷೆ ಹೇಳಿದ್ದಾರೆ.

ನೆಫಿಸಾ ಅವರು ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿಯಲ್ಲಿ ಬೋರ್‌ವೆಲ್ ಹಾಕಿಸಿ ಕೊಡಲು ರೂ 10,000 ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ಶನಿವಾರ ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನಫೀಸಾ ಮತ್ತು ಬಿಲ್ ಕಲೆಕ್ಟರ್ ವಿಲಿಯಂ ಅವರು ರೂ.10,000 ಲಂಚದ ಹಣವನ್ನು ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುತ್ತಾರೆ. ಇವರಿಬ್ಬರನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ.

ಮಂಗಳೂರು ಲೋಕಾಯುಕ್ತ ಎಸ್ಪಿ (ಪ್ರಭಾರ) ಕುಮಾರ್ ಚಂದ್ರ ನೇತೃತ್ವದಲ್ಲಿ ಡಿವೈಎಸ್ಪಿ ಡಾ.ಗಾನ.ಪಿ. ಕುಮಾರ್, ಸುರೇಶ್ ಕುಮಾರ್ ಪಿ, ಇನ್ಸ್ಪೆಕ್ಟರ್ ಭಾರತಿ, ಚಂದ್ರಶೇಖರ್ ಕೆ.ಎನ್, ರವಿ ಪವಾರ್, ಸಿಬ್ಬಂದಿ ಮಹೇಶ್, ರಾಜಪ್ಪ, ರಾಧಾಕೃಷ್ಣ, ಆದರ್ಶ್, ರಾಮ ನಾಯ್ಕ, ವಿವೇಕ್, ಪ್ರವೀಣ್,ಗಂಗಣ್ಣ, ನಾಗಪ್ಪ,ಮಾಹದೇವ, ಪವಿತ್ರ, ದುಂಡಪ್ಪ, ರುದ್ರಗೌಡ, ರಾಜಶೇಖರ್ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article