ಸ್ಕೂಟರ್ ಢಿಕ್ಕಿ ಪಾದಚಾರಿಗೆ ಗಾಯ
Sunday, October 12, 2025
ಬಂಟ್ವಾಳ: ಸ್ಕೂಟರ್ ಢಿಕ್ಕಿ ಹೊಡೆದು ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಗಾಯಗೊಂಡ ಘಟನೆ ಪಾಣೆಮಂಗಳೂರು ಗ್ರಾಮದ ಮೆಲ್ಕಾರ್ ಸಮೀಪದ ಬೋಳಂಗಡಿ ಎಂಬಲ್ಲಿ ಸಂಭವಿಸಿದೆ.
ಗಾಯಾಳುವನ್ನು ಬೋಳಂಗಡಿ ನಿವಾಸಿ ಇಬ್ರಾಹಿಂ (66) ಎಂದು ಗುರುತಿಸಲಾಗಿದೆ.
ಇವರು ಮನೆಯಿಂದ ಮೆಲ್ಕಾರ್ ಕಡೆಗೆ ಹೋಗಲು ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದ ವೇಳೆ ಮೆಲ್ಕಾರ್ ಕಡೆಯಿಂದ ಕಲ್ಲಡ್ಕದತ್ತ ತೆರಳುತ್ತಿದ್ದ ಸ್ಕೂಟರ್ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಗಾಯಾಳುವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.