ಅ.19 ರಂದು ಬಿಂದು ಜುವೆಲ್ಲರಿ ಮಂಗಳೂರು ಶಾಖೆ ಶುಭಾರಂಭ
ನಗರದ ಪ್ರೆಸ್ಕ್ಲಬ್ನಲ್ಲಿ ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಮಾಲಕರಾದ ಅಭಿಲಾಷ್ ಕೆ.ವಿ., ಎಸ್ಸಿಎಸ್ ಆಸ್ಪತ್ರೆ ಬಳಿ ಬಿಂದು ಜುವೆಲ್ಲರಿಯ ಕರ್ನಾಟಕದ 2ನೆ ಶಾಖೆ ಬೆಳಗ್ಗೆ 10.30ಕ್ಕೆ ಉದ್ಘಾಟನೆಯಾಗಲಿದೆ ಎಂದರು.
ಕೇರಳ ಹಾಗೂ ದ.ಕ. ಜಿಲ್ಲೆಯ ಸುಳ್ಯದಲ್ಲಿ ಈಗಾಗಲೇ ಮನೆ ಮಾತಾಗಿರುವ ಬಿಂದು ಜುವೆಲ್ಲರಿಯ ನೂತನ ಶಾಖೆಯಲ್ಲಿ ವಜ್ರ ಹಾಗೂ ಕಡಿಮೆ ತೂಕದ ಚಿ ನ್ನಾಭರಣಗಳಿಗೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ ಎಂದರು.
ಜುವೆಲ್ಲರಿ ಕ್ಷೇತ್ರದಲ್ಲಿ ಕಳೆದ 40 ವರ್ಷಗಳ ಅನುಭವ ಹೊಂದಿರುವ ಸಂಸ್ಥೆಯು ಗ್ರಾಹಕರ ಜತೆ ದೀರ್ಘಾವಧಿಯ ಸಂಪರ್ಕವನ್ನು ಹೊಂದಿದೆ. 1982ರಲ್ಲಿ ಸಂಸ್ಥಾಪಕ ಕೆ.ವಿ. ಕುಂಞಿಕನ್ನನ್ ಅವರಿಂದ ಬಿಂದು ಚಿನ್ನಾಭರಣಗಳ ಈ ಪಯಣ ಆರಂಭಗೊಂಡಿತ್ತು. ಇದೀಗ ಕರ್ನಾಟಕ ಮತ್ತು ಕೇರಳದ ಗ್ರಾಹಕರಿಗೆ ಚಿನ್ನದ ಪರಿಶುದ್ಧತೆಯ ಬದ್ಧತೆಯೊಂದಿಗೆ ನವನವೀನ ವಿನ್ಯಾಸವನ್ನು ಒದಗಿಸುವ ಮೂಲಕ ಅವರ ವಿಶ್ವಾಸವನ್ನು ಗಳಿಸಿಕೊಂಡಿದೆ. ತಂದೆ ಆರಂಭಿಸಿದ ಈ ಚಿನ್ನಾಭರಣದ ಉದ್ದಿಮೆಯನ್ನು ಮಕ್ಕಳಾದ ತಾವು ಮುಂದುವರಿಸಿಕೊಂಡು ಹೋಗುತ್ತಿರುವುದಾಗಿ ಅವರು ಹೇಳಿದರು.
ತನ್ನ ಹೊಸ ಶಾಖೆಯಲ್ಲಿಯೂ ಬಿಂದು ಜುವೆಲ್ಲರಿಯಿಂದ ‘ಅಕ್ಷಯ ನಿಧಿ’ ಮತ್ತು ‘ಸ್ವರ್ಣ ಬಿಂದು’ ಮಾಸಿಕ ಉಳಿತಾಯ ಯೋಜನೆ ಮುಂದುವರಿಯಲಿದೆ. ಈ ಉಳಿತಾಯ ಯೋಜನೆ ಮೂಲಕ ಗ್ರಾಹಕರು ಬೋನಸ್ ಮತ್ತು ಇತರ ಲಾಭಗಳನ್ನು ಪಡೆಯಬಹುದು ಎಂದವರು ಹೇಳಿದರು.
ಗೋಷ್ಠಿಯಲ್ಲಿ ಇನ್ನೋರ್ವ ಮಾಲಕ ಡಾ. ಅಜಿತೇಶ್ ಕೆ.ವಿ., ಹಿರಿಯ ವ್ಯವಸ್ಥಾಪಕ ಸುನಿಲ್ ರಾಜ್ ಶೆಟ್ಟಿ ಉಪಸ್ಥಿತರಿದ್ದರು.