ನಾಳೆ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾ ಕೂಟದ ಉದ್ಘಾಟನೆ ಮತ್ತು ಸಮಾರೋಪ ಸಮಾರಂಭ
ಮಂಗಳೂರು: ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟವು ಅ.26 ರಂದು ಬೆಳಗ್ಗೆ 7.30ಕ್ಕೆ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ಈ ಕಾರ್ಯಕ್ರಮವನ್ನು ಮಂಗಳೂರು ಆಕ್ಸಿಸ್ ಬ್ಯಾಂಕ್ನ ಹಿರಿಯ ಉಪಾಧ್ಯಕ್ಷ ಶಾಮ್ ಭಟ್ ಅವರು ಧ್ವಜಾರೋಹಣ ಮಾಡುವ ಮೂಲಕ ಉದ್ಘಾಟಿಸಲಿದ್ದಾರೆ.
ಸಂಜೆ ನಡೆಯುವ ಸಮಾರೋಪ ಸಮಾರಂಭದ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾರತದ ನೆಟ್ಬಾಲ್ ತಂಡದ ಮಾಜಿ ಉಪನಾಯಕ ನಿತಿನ್ ಪೂಜಾರಿ ಅವರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಎಕ್ಸ್ಪರ್ಟ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪ್ರೊ. ನರೇಂದ್ರ ಎಲ್. ನಾಯಕ್, ಎಕ್ಸ್ಪರ್ಟ್ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷೆ ಡಾ. ಉಷಾಪ್ರಭಾ ಎನ್. ನಾಯಕ್, ಮಾಹಿತಿ ಮತ್ತು ತಂತ್ರಜ್ಞಾನ ವಿಭಾಗದ ನಿರ್ದೇಶಕ ಅಂಕುಶ್ ಎನ್. ನಾಯಕ್, ವಾಸ್ತುತಜ್ಞೆ ದೀಪಿಕಾ ಎ. ನಾಯಕ್, ಕಾಲೇಜಿನ ಪ್ರಾಂಶುಪಾಲ ಪ್ರೊ. ರಾಮಚಂದ್ರ ಭಟ್ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಪಥ ಸಂಚಲನ ಸೇರಿದಂತೆ ವಿದ್ಯಾರ್ಥಿಗಳಿಗೆ ವಿವಿಧ ಕ್ರೀಡಾ ಸರ್ಧೆಗಳನ್ನು ಆಯೋಜಿಸಲಾಗಿದೆ.