‘ಚೀಫ್ ಮಿನಿಸ್ಟರ್ಸ್ ಮಂಗಳೂರು': ಚಾಲೆಂಜ್ ಬ್ಯಾಡ್ಮಿಂಟನ್ ಟೂರ್ನಿ

‘ಚೀಫ್ ಮಿನಿಸ್ಟರ್ಸ್ ಮಂಗಳೂರು': ಚಾಲೆಂಜ್ ಬ್ಯಾಡ್ಮಿಂಟನ್ ಟೂರ್ನಿ

ಮಂಗಳೂರು: ‘ಚೀಫ್ ಮಿನಿಸ್ಟರ್ಸ್ ಮಂಗಳೂರು’ ಇಂಡಿಯಾ ಇಂಟರ್‌ನ್ಯಾಷನಲ್ ಚಾಲೆಂಜ್ ಬ್ಯಾಡ್ಮಿಂಟನ್ ಟೂರ್ನಿ ಅ.27 ರಿಂದ ನ.2ರ ವರೆಗೆ ನಗರದ ಉರ್ವ ಒಳಾಂಗಣ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. 

ಶುಕ್ರವಾರ ಸಂಜೆ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಿಶ್ವ ಬ್ಯಾಡ್ಮಿಂಟನ್ ಫೆಡರೇಷನ್, ಭಾರತ ಬ್ಯಾಡ್ಮಿಂಟನ್ ಫೆಡರೇಷನ್, ರಾಜ್ಯದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಬ್ಯಾಡ್ಮಿಂಟನ್ ಸಂಸ್ಥೆಯ ಸಹಯೋಗದಲ್ಲಿ ನಡೆಯುವ ಟೂರ್ನಿಯಲ್ಲಿ 12 ದೇಶಗಳ ಆಟಗಾರರು ಪಾಲ್ಗೊಳ್ಳಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸುವರು’ ಎಂದರು.

ಟೂರ್ನಿಗೆ ಒಟ್ಟು 2.5 ಕೋಟಿ ವೆಚ್ಚವಾಗಲಿದ್ದು, ರಾಜ್ಯ ಸರ್ಕಾರ 1 ಕೋಟಿ ನೆರವು ನೀಡಿದೆ ಎಂದು ದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಸಂಸ್ಥೆಯ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ತಿಳಿಸಿದರು.  

ಪುತ್ತೂರು ಶಾಸಕ  ಅಶೋಕ್ ರೈ, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ, ಮಂಜುನಾಥ ಭಂಡಾರಿ, ಬ್ಯಾಂಡ್ಮಿಂಟನ್ ಅಸೋಸಿಯೇಶನ್ ಕಾರ್ಯದರ್ಶಿ ಸುಪ್ರೀತ್ ಆಳ್ವ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article