ಪೊಲೀಸ್ ಠಾಣೆಗೆ ಬರುತ್ತಿರುವ ಯುವ ಜನತೆಯ ಸಮಸ್ಯೆಗಳು ಗಾಬರಿ ಹುಟ್ಟಿಸುತ್ತದೆ: ಟಿ.ಡಿ. ನಾಗರಾಜ್
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಎಕ್ಸ್ಪರ್ಟ್ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷ ಪ್ರೊ. ನರೇಂದ್ರ ಎಲ್. ನಾಯಕ್ ಮಾತನಾಡಿ, ಇದೊಂದು ಮಹತ್ತ್ವದ ಹೆಜ್ಜೆಯಾಗಿದ್ದು, ವಿದ್ಯಾರ್ಥಿಗಳಿಗೆ ಹಾಗೂ ಸಮಾಜಕ್ಕೆ ಉಪಯೋಗಪ್ರದವಾಗಲಿದೆ. ಕರ್ತವ್ಯಪ್ರಜ್ಞೆ, ಕಠಿಣ ಪರಿಶ್ರಮ ಮತ್ತು ಶಿಸ್ತು ಸಾಧನೆಗೆ ದಾರಿದೀಪವಾಗಿದೆ. ನಮ್ಮ ಕರ್ತವ್ಯಗಳನ್ನು ಮರೆಯದೆ ಹಕ್ಕುಗಳನ್ನು ಅರಿತು ಬಳಸಿದರೆ ಅರ್ಥಪೂರ್ಣವಾಗುತ್ತದೆ ಎಂದರು.
ಎಕ್ಸ್ಪರ್ಟ್ ಶಿಕ್ಷಣ ಸಮೂಹ ಸಂಸ್ಥೆಗಳ ಉಪಾಧ್ಯಕ್ಷೆ ಡಾ. ಉಷಾಪ್ರಭಾ ಎನ್ ನಾಯಕ್ ಮಾತನಾಡಿ, ಇಂದಿನ ಮಕ್ಕಳು ವಯೋಮಾನ ಮೀರಿ ಬುದ್ಧಿವಂತರಾಗುತ್ತಿದ್ದಾರೆ. ತಮ್ಮ ಸಮಸ್ಯೆಗಳನ್ನು ತಾವೇ ಬಗೆಹರಿಸುವಷ್ಟು ವಿಕಾಸಗೊಳ್ಳುತ್ತಿದ್ದಾರೆ, ಆದರೆ ಇದು ಇಂಥ ಅರಿವು ಮೂಡಿಸುವ ಸತತ ಕಾರ್ಯಕ್ರಮಗಳಿಂದ ಮಾತ್ರ ಇದು ಸಾಧ್ಯವಾಗಬಹುದು ಎಂದು ಹೇಳಿದರು.
ಎಕ್ಸ್ಪರ್ಟ್ ಶಿಕ್ಷಣ ಸಮೂಹ ಸಂಸ್ಥೆಗಳ ಮಾಹಿತಿ ತಂತ್ರಜ್ಞಾನ ನಿರ್ದೇಶಕ ಅಂಕುಶ್ ಎನ್. ನಾಯಕ್ ಉಪಸ್ಥಿತರಿದ್ದರು.
ಪ್ರಾಂಶುಪಾಲ ಡಾ. ಎನ್.ಕೆ. ವಿಜಯನ್ ಕರಿಪ್ಪಾಲ್ ಸ್ವಾಗತಿಸಿ, ಉಪಪ್ರಾಶುಪಾಲೆ(ಆಡಳಿತ) ಧೃತಿ ವಿ. ಹೆಗ್ಡೆ ವಂದಿಸಿದರು.
‘ಬೀಕನ್ ಬಡ್ಡೀಸ್’ ಇದೊಂದು ವಿಶಿಷ್ಟ ಕಾರ್ಯಕ್ರಮವಾಗಿದ್ದು, ಕರ್ನಾಟಕದಲ್ಲಿ ಇದೇ ಮೊದಲನೆಯದು. ಇದು ವಿದ್ಯಾರ್ಥಿಗಳ ನೇತೃತ್ವದಲ್ಲಿ ಸಮಾನ ವಯೋಮಾನದ ಮಕ್ಕಳ ಮಾನಸಿಕ ಆರೋಗ್ಯ ಮತ್ತು ಮಕ್ಕಳ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲಿದೆ.
ಪ್ರಥಮ ಮತ್ತು ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ತಮ್ಮ ಸಹಪಾಠಿಗಳನ್ನು ಭಾವನಾತ್ಮಕವಾಗಿ ಬೆಂಬಲಿಸುವ ಕೌಶಲ್ಯಗಳೊಂದಿಗೆ ಸಬಲೀಕರಣಗೊಳಿಸುತ್ತದೆ. ಮಕ್ಕಳ ಹಕ್ಕುಗಳು, ರಕ್ಷಣೆ ಮತ್ತು ಜವಾಬ್ದಾರಿಗಳ ಬಗ್ಗೆ ಜಾಗೃತಿ ಮೂಡಿಸುತ್ತದೆ. ಈ ಎರಡು ಪ್ರಮುಖ ಆಯಾಮಗಳನ್ನು ವಿಲೀನಗೊಳಿಸುವ ಮೂಲಕ, ಕ್ಲಬ್ ಮಕ್ಕಳ ಹಕ್ಕುಗಳ ಕುರಿತು ಅರಿವುಳ್ಳ ಶಾಲಾ ವಾತಾವರಣವನ್ನು ಸೃಷ್ಟಿಸುತ್ತದೆ.
‘ಬೀಕನ್ ಬಡ್ಡೀಸ್’ನ ಉದ್ದೇಶಗಳು:
ತಮ್ಮ ಸ್ನೇಹಿತರಲ್ಲಿ ಒತ್ತಡ, ಆತಂಕ ಅಥವಾ ಭಾವನಾತ್ಮಕ ಸವಾಲುಗಳ ಆರಂಭಿಕ ಚಿಹ್ನೆಗಳನ್ನು ಗುರುತಿಸಬಲ್ಲ ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ಪ್ರಾಥಮಿಕ ಹಂತದ ಬೆಂಬಲವನ್ನು ನೀಡುತ್ತದೆ.
ವಿದ್ಯಾರ್ಥಿಗಳು, ಸಿಬ್ಬಂದಿ ಮತ್ತು ಶಾಲಾ ಸಮುದಾಯದಲ್ಲಿ ಮಕ್ಕಳ ಹಕ್ಕುಗಳು ಮತ್ತು ಮಕ್ಕಳ ರಕ್ಷಣಾ ನೀತಿಗಳ ಬಗ್ಗೆ ಜಾಗೃತಿ ಮೂಡಿಸುತ್ತದೆ. ಸಹಪಾಠಿಗಳೊಂದಿಗೆ ಗೌರವ, ಸಹಾನುಭೂತಿ, ಒಗ್ಗಟ್ಟಿನ ಸಂಸ್ಕೃತಿ, ಕಾನೂನುಗಳ ಅರಿವು ಮತ್ತು ಪ್ರಾಯೋಗಿಕ ತಿಳುವಳಿಕೆಯನ್ನು ಮೂಡಿಸಲಿದೆ.




