ಸಿಡಿಲು ಬಡಿದು ಆರು ಮಂದಿಗೆ ಗಾಯ
Monday, October 13, 2025
ಮಂಗಳೂರು: ಎರಡು ಮನೆಗಳಿಗೆ ಸಿಡಿಲು ಬಡಿದು ಆರು ಮಂದಿ ಗಾಯಗೊಂಡಿರುವ ಘಟನೆ ಸುರತ್ಕಲ್ ಕಾಟಿಪಳ್ಳ 9ನೇ ಬ್ಲಾಕ್ ಮಧ್ಯದ ಗುರುನಗರ ಎಂಬಲ್ಲಿ ಕಳೆದ ರಾತ್ರಿ ನಡೆದಿದೆ.
ಭಾರತಿ(30), ವಿನಯ(35), ಕುಸುಮ(55), ಹರಿಯಪ್ಪ(67), ರವಿಕಲಾ (60), ನಿತೀಶ್ (35) ಎಂಬವರು ಗಾಯಗೊಂಡಿದ್ದು, ಅವರನ್ನು ಕಾನದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ .ಕಾಟಿಪಳ್ಳ 9ನೇ ಬ್ಲಾಕ್ ಪರಿಸರದಲ್ಲಿ ರವಿವಾರ ರಾತ್ರಿ ಏಕಾಏಕಿ ಸಿಡಿಲು ಗುಡುಗು ಸಹಿತ ಭಾರೀ ಮಳೆಯಾಗಿದೆ. ಈ ವೇಳೆ ಹರಿಯಪ್ಪ ಮತ್ತು ರವಿಕಲಾ ಎಂಬವರ ಮನೆಯ ವಿದ್ಯುತ್ ಸ್ವಿಚ್ ಬೋರ್ಡ್ ಗೆ ಸಿಡಿಲು ಬಡಿಯಿತೆನ್ನಲಾಗಿದೆ.
ಘಟನೆಯಿಂದ ಮನೆಯಲ್ಲಿದ್ದ ಎಲ್ಲಾ ಸ್ವಿಚ್ ಬೋರ್ಡ್ಗಳು ಸುಟ್ಟು ಕರಕಲಾಗಿವೆ. ಮನೆಯ ನೆಲ, ಗೋಡೆ ಮತ್ತು ಮೇಲ್ಛಾವಣಿಗೆ ಹಾನಿಯಾಗಿದ್ದು, ಅಪಾರ ನಷ್ಟ ಸಂಭವಿಸಿದೆ.