ಎಂಬಿಎ ನಾಯಕತ್ವ ಗುಣ, ಆಡಳಿತಾತ್ಮಕ ಕೌಶಲ್ಯ ಸಾಧಿಸಲು ಪೂರಕವಾಗಿದೆ: ಐವನ್ ಡಿಸೋಜ

ಎಂಬಿಎ ನಾಯಕತ್ವ ಗುಣ, ಆಡಳಿತಾತ್ಮಕ ಕೌಶಲ್ಯ ಸಾಧಿಸಲು ಪೂರಕವಾಗಿದೆ: ಐವನ್ ಡಿಸೋಜ


ಮಂಗಳೂರು: ಎಂಬಿಎ ಅಧ್ಯಯನ ಕೌಶಲ್ಯ ಮತ್ತು ಅವಕಾಶಗಳ ಸಂಗಮವಾಗಿದೆ ಎಂಬಿಎ ಅಧ್ಯಯನ ನಾಯಕತ್ವ ಗುಣ, ಆಡಳಿತಾತ್ಮಕ ಕೌಶಲ್ಯ ಸಾಧಿಸಲು ಪೂರಕವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಹೇಳಿದರು.


ಅವರು ಇತ್ತೀಚೆಗೆ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಎಂಬಿಎ (ಐಬಿ) ವಿಭಾಗದ ವತಿಯಿಂದ ನೂತನ ವಿದ್ಯಾರ್ಥಿಗಳಿಗೆ ನಡೆದ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.


ವಿಶ್ವವಿದ್ಯಾನಿಲಯ ಕಾಲೇಜಿನ ಎಂಬಿಎ ವಿಭಾಗಕ್ಕೆ ದಾಖಲಾದ ನೂತನ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. 


ಸಂಧ್ಯಾ ಕಾರ್ಯಕ್ರಮ ಎಂಬಿಎ ವಿಭಾಗದ ಸಲಹೆಗಾರ ಪ್ರೊ. ಜಯವಂತ ನಾಯಕ್ ಮಾತನಾಡಿ, ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಸಂಧ್ಯಾ ಎಂಬಿಎ ಕಾರ್ಯಕ್ರಮವನ್ನು ಪ್ರಾರಂಭಿಸುವಲ್ಲಿ ವಿಶೇಷ ಮುತುವರ್ಜಿ ವಹಿಸಿದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರ ಕೊಡುಗೆಯನ್ನು ಸ್ಮರಿಸಿದರು. 

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಗಣಪತಿ ಗೌಡ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ತಮಗೆ ಲಭಿಸಿದ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಂಡಲ್ಲಿ ಅಗಾಧ ಸಾಧನೆಯನ್ನು ಮಾಡಬಹುದೆಂದು ಹೇಳಿದರು.

ಕಾರ್ಯಕ್ರಮದಲ್ಲಿ ವಾರಂಗಲ್ ನಲ್ಲಿ ನಡೆಯಲಿರುವ ಕೇಲೋ ಇಂಡಿಯಾ ರಾಷ್ಟ್ರಮಟ್ಟದ ಹ್ಯಾಮರ್ ಥ್ರೋ ಸ್ಪರ್ಧೆಯಲ್ಲಿ ಭಾಗಿಯಾಗಲಿರುವ ಎಂಬಿಎ ವಿಭಾಗದ ವಿದ್ಯಾರ್ಥಿ ನಿಶಾಲ್ ಡೆಲ್ಫಿನ್ ಡಿಸೋಜ ಅವರನ್ನು ಸನ್ಮಾನಿಸಲಾಯಿತು.

ಅರ್ಲಿನ್ ಶಾಲ್ಮ ಫೆರ್ನಾಂಡಿಸ್ ಸ್ವಾಗತಿಸಿದರು. ಮಹಮದ್ ಶೌಹಾನ್ ವಂದಿಸಿದರು. ಕಾರ್ಯಕ್ರಮವನ್ನು ಶರಣ್ಯ ನಿರ್ವಹಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article