ಪ್ರತಿಭಾ ಅನ್ವೇಷಣೆ ಕಾರ್ಯಕ್ರಮ

ಪ್ರತಿಭಾ ಅನ್ವೇಷಣೆ ಕಾರ್ಯಕ್ರಮ


ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಲಲಿತ ಕಲಾ ಸಂಘದ ವತಿಯಿಂದ ಪತ್ರಿಭಾ ಅನ್ವೇಷಣೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿದ ಕಾಲೇಜಿನ ಪ್ರಾಂಶುಪಾಲ ಪ್ರೊ. ಎಸ್. ಗಣಪತಿ ಗೌಡ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸುಪ್ತವಾಗಿ ಅಡಗಿರುವ ಪ್ರತಿಭೆಯನ್ನು ಅನಾವರಣ ಮಾಡಲು ಇದು ಉತ್ತಮ ವೇದಿಕೆಯಾಗಿದೆ. ಇಲ್ಲಿಂದ ಹೊರಬರುವ ಪ್ರತಿಭೆ ಬದುಕಿನುದ್ದಕ್ಕೂ ಮುನ್ನೆಡೆಸುವಂತಾಗಲಿ ಎಂದು ಹಾರೈಸಿದರು.

ಈ ಸಂದರ್ಭ ಲಲಿತ ಕಲಾ ಸಂಘದ ಉಪನಿರ್ದೇಶಕಿ ಡಾ. ನಾಗರತ್ನ ಕೆ.ಎ., ವಿದ್ಯಾರ್ಥಿ ಸಂಘದ ಉಪನಿರ್ದೇಶಕ ಪ್ರೊ. ಜಯವಂತ ನಾಯಕ್, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಹಾಗೂ ವಿವಿಧ ವಿಭಾಗಗಳ ಉಪನ್ಯಾಸಕರು ಉಪಸ್ಥಿರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article