ಅಂಬ್ಯುಲೆನ್ಸ್ಗೆ ಸೈಡ್ ಬಿಡದ ಆರೋಪಿ ಸೆರೆ
Friday, October 31, 2025
ಮಂಗಳೂರು: ಬಿಸಿಲೆ ಘಾಟ್ ಘಾಟ್ ನಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆಯನ್ನು ಮಂಗಳೂರಿನ ಆಸ್ಪತ್ರೆಗೆ ಅಂಬ್ಯುಲೆನ್ಸ್ ನಲ್ಲಿ ಕರೆ ತರುತ್ತಿದ್ದ ವೇಳೆ ದ್ವಿಚಕ್ರ ವಾಹನದಲ್ಲಿ ಅಡ್ಡಗಟ್ಟಿ ಸೈಡ್ ಕೊಡದೆ ಸತಾಯಿಸಿದ ವಿಡಿಯೋ ವೈರಲ್ ಆಗಿದ್ದು ಘಟನೆ ಸಂಬಂಧಿಸಿ ಬಂಟ್ವಾಳ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಗುರುವಾರ ಮಧ್ಯಾಹ್ನ 1.30 ಗಂಟೆಗೆ ಬಂಟ್ವಾಳ ತಾಲೂಕು ಬಿ.ಸಿ.ರೋಡ್ ಎನ್ ಜಿ ಸರ್ಕಲ್ನಿಂದ ಅಂಬ್ಯುಲೆನ್ಸ್ ಮುಂದಿನಿಂದ ಏಂ.19.ಇಏ.0696 ನೇ ದ್ವಿಚಕ್ರ ವಾಹನ ಸವಾರ ಅಂಬ್ಯುಲೆನ್ಸ್ ಸೈರನ್ ಶಬ್ದ ಕೇಳಿಯೂ ದಾರಿ ಬಿಟ್ಟು ಕೊಡದೆ ಅಂಬ್ಯುಲೆನ್ಸ್ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ್ದಾನೆ. ಈ ವೇಳೆ, ಆಂಬುಲೆನ್ಸ್ ನಲ್ಲಿದ್ದ ಸಿಬಂದಿ ಮೊಬೈಲ್ ನಲ್ಲಿ ವಿಡಿಯೋ ಮಾಡಿದ್ದು ಜಾಲತಾಣದಲ್ಲಿ ಹಾಕಿದ್ದರು.
ಆರೋಪಿ ಬೆಟ್ಟಂಪಾಡಿ ಗ್ರಾಮ ನಿವಾಸಿ ಮಹಮ್ಮದ್ ಮನ್ಸೂರು(38) ಎಂಬುವರ ಮೇಲೆ ಬಂಟ್ವಾಳ ನಗರ ಪೊಲೀಸ್ ಠಾಣಾ ಅ.ಕ್ರ 128/2025 ಕಲಂ:110, 125 ಬಿ.ಎನ್.ಎಸ್ ನಂತೆ ಪ್ರಕರಣ ದಾಖಲಿಸಿ ವಶಕ್ಕೆ ಪಡೆಯಲಾಗಿದೆ.