ಕೊರಗರು ಮತ್ತು ಜೇನುಕುರುಬರಿಗೆ ಪ್ರತ್ಯೇಕ ಒಳ ಮೀಸಲಾತಿ ಅಗತ್ಯ: ಪಾಂಗಾಳ ಬಾಬು ಕೊರಗ
ಅನಾದಿ ಕಾಲದಿಂದಲೂ ಸಾಮಾಜಿಕ ಶೋಷಣೆ, ದಬ್ಬಾಳಿಕೆಗಳಿಂದ ನೊಂದು ಬೆಂದಿರುವ ಹಾಗೂ ವಿನಾಶದ ಅಂಚಿನಲ್ಲಿರುವ ಕೊರಗರಂತಹ ಅಸುರಕ್ಷಿತ ಸಮುದಾಯಗಳು ಅವರೊಂದಿಗೆ ಸ್ಫರ್ಧಿಸಿ ಸಮಪಾಲು ಪಡೆಯುವುದು ಸಾಧ್ಯವೇ ಇಲ್ಲ. ಮೇಲಾಗಿ ಸರಕಾರವೇ ಕೊರಗರು ಮತ್ತು ಜೇನುಕುರುಬರನ್ನು ಪ್ರೈಮಿಟಿವ್ ಟ್ರೈಬ್ಸ್ ಅಂದರೆ ‘ನೈಜ ದುರ್ಬಲ ಬುಡಕಟ್ಟು’ ಸಮುದಾಯಗಳೆಂದು ಹಿಂದೆಯೇ ಗುರುತಿಸಿದೆ. ಆದ್ದರಿಂದ ಸರ್ಕಾರ ಕಾಲ ವಿಳಂಬ ಮಾಡದೆ ಈ ಎರಡು ಆದಿಮ ಬುಡಕಟ್ಟುಗಳನ್ನು ಪ್ರತ್ಯೇಕಿಸಿ, ಒಳಮೀಸಲಾತಿಯನ್ನು ಘೋಷಿಸಬೇಕು. ಪರಿಶಿಷ್ಟ ವರ್ಗಗಳ ಒಟ್ಟು 7 ಶೇಕಡ ಮೀಸಲಾತಿಯಲ್ಲಿ ಅರ್ಧ ಪರ್ಸೆಂಟ್ನ್ನು ಈ ಎರಡು ಸಮುದಾಯಗಳಿಗೆ ಮೀಸಲಿಟ್ಟರೆ ಮಾತ್ರ ಇವರ ಪ್ರಗತಿ ಸಾಧ್ಯ. ಇಲ್ಲವಾದಲ್ಲಿ ಕೆಲವೇ ವರ್ಷಗಳಲ್ಲಿ ಕೊರಗ ಸಮುದಾಯವು ಸರ್ವನಾಶ ಆಗಲಿದೆ.
ಜನಪ್ರತಿನಿಧಿಗಳು, ಅಧಿಕಾರಿಗಳು, ಹಾಗೂ ಸಮಾಜಿಕ ಬದ್ಧತೆ ಇರುವ ಜನಸಾಮಾನ್ಯರು, ಸಾರ್ವಜನಿಕರು ಈ ನಿಟ್ಟಿನಲ್ಲಿ ಸರಕಾರದ ಮೇಲೆ ಒತ್ತಡ ಹಾಕಬೇಕು ಎಂದು ಹಿರಿಯ ಸಾಹಿತಿ, ಕೊರಗ ಸಮುದಾಯದ ಹೋರಾಟಗಾರ ಪಾಂಗಾಳ ಬಾಬು ಕೊರಗ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.