ಸುಳ್ಯದಲ್ಲಿ ಜಿಲ್ಲಾ ಮಟ್ಟದ ಪಿಯು ವಿಭಾಗದ ಕಬಡ್ಡಿ ಪಂದ್ಯಾಟ

ಸುಳ್ಯದಲ್ಲಿ ಜಿಲ್ಲಾ ಮಟ್ಟದ ಪಿಯು ವಿಭಾಗದ ಕಬಡ್ಡಿ ಪಂದ್ಯಾಟ


ಸುಳ್ಯ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ಸುಳ್ಯದ ನೆಹರು ಮೆಮೋರಿಯಲ್ ಪ.ಪೂ. ಕಾಲೇಜಿನ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಪ.ಪೂ. ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟ ಶ್ರೀ ಚೆನ್ನಕೇಶವ ದೇವಾಲಯದ ಮುಂಭಾಗ ಶ್ರೀ ಶಾರದಾಂಬ ವೇದಿಕೆಯಲ್ಲಿ ನಡೆಯಿತು. 

ಜಿಲ್ಲಾ ಕ್ರೀಡಾ ಸಂಯೋಜಕ ಪ್ರೇಮನಾಥ್ ಶೆಟ್ಟಿ ಉದ್ಘಾಟಿಸಿದರು. ಎಒಎಲ್‌ಇ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ. ಅಧ್ಯಕ್ಷತೆ ವಹಿಸಿದ್ದರು.

ಶಾರದಾಂಬ ಸೇವಾ ಸಮಿತಿಯ ಗೌರವಾಧ್ಯಕ್ಷ ಗೋಕುಲ್‌ದಾಸ್, ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು, ಸಂಸ್ಥೆಯ ಪ್ರಾಚಾರ್ಯರಾದ ಮಿಥಾಲಿ ಪಿ. ರೈ, ಪದವಿ ವಿಭಾಗದ ಪ್ರಾಚಾರ್ಯ ಡಾ. ರುದ್ರ ಕುಮಾರ್ ಎಂ.ಎಂ., ಎನ್ನೆಂಪಿಯು ಕಾಲೇಜಿನ ಕಬಡ್ಡಿ ಕೋಚ್ ನಾಗರಾಜ್ ನಾಯ್ಕ್ ಭಟ್ಕಳ, ಕಾಲೇಜಿನ ವಿದ್ಯಾರ್ಥಿ ಕ್ಷೇಮಾಧಿಕಾರಿ ಬೇಬಿ ವಿದ್ಯಾ ಪಿ.ಬಿ. ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ಶರಣ್ಯ ಮತ್ತು ಬಳಗದವರು ಆಶಯ ಗೀತೆ ಹಾಡಿದರು. ವಿದ್ಯಾರ್ಥಿ ಕ್ಷೇಮಾಧಿಕಾರಿ ಬೇಬಿ ವಿದ್ಯಾ ಪಿ.ಬಿ. ಸ್ವಾಗತಿಸಿ, ಪ್ರಾಚಾರ್ಯರಾದ ಮಿಥಾಲಿ ಪಿ. ರೈ ವಂದಿಸಿದರು. ಉಪನ್ಯಾಸಕಿಯರಾದ ಸಾವಿತ್ರಿ ಕೆ., ರೇಷ್ಮಾ ಎಂ.ಎಂ. ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿ ಶ್ರೇಯ ನೃತ್ಯ ಸಾದರಪಡಿಸಿದರು. ತೀರ್ತೆಶ್ ಯಾದವ್ ವೀಕ್ಷಕ ವಿವರಣೆ ನೀಡಿದರು. ಜಿಲ್ಲೆಯ 9 ತಾಲೂಕುಗಳ ಬಾಲಕ ಹಾಗೂ ಬಾಲಕಿಯರ ತಂಡ ಪಂದ್ಯಾಟದಲ್ಲಿ ಭಾಗವಹಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article