ಚಾರ್ಮಾಡಿ ಘಾಟ್ನಲ್ಲಿ ಕಾರು ಪಲ್ಟಿ: ಮೂವರು ಪ್ರಾಣಾಪಾಯದಿಂದ ಪಾರು
Monday, October 27, 2025
ಉಜಿರೆ: ಚಾರ್ಮಾಡಿ ಘಾಟ್ನಲ್ಲಿ ನಡೆದ ಕಾರು ಪಲ್ಟಿ ಅವಘಡದಲ್ಲಿ ಮೂವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾದ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.
ಮೂಡುಬಿದಿರೆಯಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಕಾರು ಚಾರ್ಮಾಡಿ ಘಾಟ್ನ ಅಣ್ಣಪ್ಪಸ್ವಾಮಿ ದೇವಸ್ಥಾನ ಸಮೀಪ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಕಾರು ತೀವ್ರವಾಗಿ ಹಾನಿಗೊಳಗಾದರೂ, ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಸಣ್ಣಪುಟ್ಟ ಗಾಯಗೊಂಡು ಅಪಾಯದಿಂದ ಪಾರಾಗಿದ್ದಾರೆ. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.