ಧರ್ಮಸ್ಥಳದಲ್ಲಿ ಕಳವು: ತಾಯಿ, ಮಗಳು ಬಂಧನ

ಧರ್ಮಸ್ಥಳದಲ್ಲಿ ಕಳವು: ತಾಯಿ, ಮಗಳು ಬಂಧನ

ಧರ್ಮಸ್ಥಳ: ಧರ್ಮಸ್ಥಳ ದೇವಸ್ಥಾನದ ಒಳಗಡೆ ಆಂಧ್ರಪ್ರದೇಶದ ಭಕ್ತಾದಿಗಳ ಬ್ಯಾಗ್‌ನಿಂದ ಚಿನ್ನಾಭರಣ ಕಳ್ಳತನ ಮಾಡಿದ ತಾಯಿ-ಮಗಳನ್ನು ಐದು ತಿಂಗಳ ಬಳಿಕ ಧರ್ಮಸ್ಥಳ ಸಬ್ ಇನ್ಸ್‌ಪೆಕ್ಟರ್ ಸಮರ್ಥ್ ಆರ್ ಗಾಣಿಗೇರ ತಂಡ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆಂಧ್ರಪ್ರದೇಶ ರಾಜ್ಯದ ನೆಲ್ಲೂರು ನಿವಾಸಿ ಜೆ.ಲತಾ ಅವರು ಕುಟುಂಬ ಸಮೇತ ಮೇ.2 ರಂದು ಮನೆಯಿಂದ ಹೊರಟು ಮೇ.3 ರಂದು ಸಂಜೆ 5 ಗಂಟೆಗೆ ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನಕ್ಕೆ ದರ್ಶನಕ್ಕೆ 5.15 ರಿಂದ 6 ಗಂಟೆ ಸಮಯಕ್ಕೆ ಬ್ಯಾಗ್ ನಲ್ಲಿ 6,79,000 ರೂಪಾಯಿ ಮೌಲ್ಯದ 97 ಗ್ರಾಂ ಚಿನ್ನಾಭರಣವನ್ನು ಇಟ್ಟುಕೊಂಡು ಹೋಗಿದ್ದರು. ಬಳಿಕ ಉಡುಪಿ ಕಡೆ ಕೆಲಸದ ವಿಚಾರವಾಗಿ ಹೋಗುವಾಗ ಬ್ಯಾಗ್ ಒಳಗಡೆ ಇಟ್ಟಿದ ಚಿನ್ನಾಭರಣ ನೋಡಿದಾಗ ಯಾರೋ ಕಳ್ಳರು ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಉಡುಪಿಯಿಂದ ವಾಪಸ್ ಧರ್ಮಸ್ಥಳ ಪೊಲೀಸ್ ಠಾಣೆಗೆ ಬಂದು ಮೇ.4 ರಂದು ಜೆ.ಲತಾ ಅವರು ಪ್ರಕರಣ ದಾಖಲಿಸಿದ್ದರು.

ಧರ್ಮಸ್ಥಳ ಪೊಲೀಸರು ಪ್ರಕರಣದ ಬಗ್ಗೆ ಕಳೆದ ಐದು ತಿಂಗಳಿನಿಂದ ವಿವಿಧ ಅಯಾಮಗಳಲ್ಲಿ ತನಿಖೆ ಮಾಡುತ್ತಿರುವಾಗ ಚಿನ್ನಾಭರಣ ಕಳ್ಳತನ ಮಾಡಿದ ಆರೋಪಿಗಳಿಬ್ಬರು ವಿವಿಧ ಕಡೆ ಪ್ರಯಾಣ ಮಾಡಿಕೊಂಡು ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳುತ್ತಿದ್ದರು. 

ಕೊನೆಗೂ ಆರೋಪಿಗಳನ್ನು ನ.23 ರಂದು ಧರ್ಮಸ್ಥಳದ ದ್ವಾರದ ಬಳಿ ಮತ್ತೆ ಕಳ್ಳತನ ಮಾಡಲು ಬರುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಧಾರವಾಡ ಜಿಲ್ಲೆಯ ಹುಬ್ಬಳಿ ನಗರದ ಸಟಲ್ಮೆಂಟ್ 2 ನೇ ಕ್ರಾಸ್ ಗಂಗಾಧರ ನಗರ ನಿವಾಸಿ ತಾಯಿ ಬಿ.ಬಿ.ಜಾನ್(59) ಮತ್ತು ಮಗಳು ಮಸಾಭಿ @ ಆರತಿ (34) ಎಂಬುವರನ್ನು ಬಂಧಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article