ಕಾರ್ಕಳ ತಾಲೂಕು ಮಟ್ಟದ ಕ್ರೀಡಾಕೂಟ

ಕಾರ್ಕಳ ತಾಲೂಕು ಮಟ್ಟದ ಕ್ರೀಡಾಕೂಟ


ಕಾರ್ಕಳ: ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಕಾರ್ಕಳ, ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲೆ ಕುಕ್ಕುಜೆ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ವಾರ್ಷಿಕ ಕ್ರೀಡಾಕೂಟ ನ.6 ರಂದು ನಡೆಯಿತು. 

ಅಧ್ಯಕ್ಷತೆಯನ್ನು ಕಡ್ತಲ ಗ್ರಾಮ ಪಂಚಾಯತ್ ಅಧ್ಯಕ್ಷ ಸುಕೇಶ್ ಹೆಗ್ಡೆ ವಹಿಸಿದ್ದರು.

ಕ್ರೀಡಾಕೂಟ ಉದ್ಘಾಟಿಸಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಮಾತನಾಡಿ ಸಮಾಜದ ಸಾಮರಸ್ಯ ಕಾಪಾಡಲು ಕ್ರೀಡೆ ಸಹಕಾರಿಯಾಗಿದೆ ಎಂದರು ಅತಿಥಿಗಳಾಗಿ  ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ, ಉದ್ಯಮಿ ಪುರಂದರ ಪೂಜಾರಿ, ಯೋಗಿಶ್ ಮಲ್ಯ, ಗಜಾನಂದ, ಮುಂಡಾರು ಪ್ರಸನ್ನ ಶೆಟ್ಟಿ, ಹೆಬ್ರಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಶಂಕರ ಸೆರ್ವೆಗಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಗಿರಿಜಮ್ಮ, ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿ ರವಿಚಂದ್ರ ಕಾರಂತ, ಪ್ರಾಂಶುಪಾಲ ಬಾಬುರಾಯ ಕಾಮತ್, ಕಾರ್ಕಳ ಸಾಹಿತ್ಯ ಸಂಘ ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ದಿನೇಶ್ ಉಪಸ್ಥಿತರಿದ್ದರು. 

ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ದಯಾನಂದ ಹೆಗ್ಡೆ ಸ್ವಾಗತಿಸಿದರು. ಶಿಕ್ಷಕ ಸುರೇಶ್ ಮರಕಾಲ ಕಾರ್ಯಕ್ರಮ ನಿರೂಪಿಸಿದರು. ಕಡ್ತಲ ಗ್ರಾ.ಪಂ. ಮಾಜಿ ಅಧ್ಯಕ್ಷ ಅರುಣ್ ಕುಮಾರ್ ಹೆಗ್ಡೆ ದಾನಿಗಳ ಪಟ್ಟಿ ವಾಚಿಸಿದರು. ಪಥ ಸಂಚಲನದಲ್ಲಿ ಜ್ಞಾನ ಸುಧಾ ಪ್ರಥಮ, ಕುಚ್ಚೂರು ದ್ವೀತಿಯ, ನಿಟ್ಟೆ ಎನ್ ಎಸ್ ಎ ಎಂ ತೃತೀಯ ಸ್ಥಾನ ಪಡೆದುಕೊಂಡಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article