ರೇಶನ್ ಕಾರ್ಡ್ನಲ್ಲಿ ಕನ್ನಡ ಮುದ್ರಿಸಲು ಆದೇಶ

ರೇಶನ್ ಕಾರ್ಡ್ನಲ್ಲಿ ಕನ್ನಡ ಮುದ್ರಿಸಲು ಆದೇಶ

ಕಾಸರಗೋಡು: ಕೇರಳ ರಾಜ್ಯದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು  ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ, ಕಾರ್ಯದರ್ಶಿ  ಪ್ರಕಾಶ ಮತ್ತೀಹಳ್ಳಿ, ಕಾಸರಗೋಡು ಶಾಸಕ ಎನ್.ಎ. ನೆಲ್ಲಿಕುನ್ನು, ಮಂಜೇಶ್ವರ ಶಾಸಕರಾದ  ಎ.ಕೆ.ಎಂ. ಅಶ್ರಫ್, ಸದಸ್ಯ ಎ.ಆರ್. ಸುಬ್ಬಯ್ಯ ಕಟ್ಟೆ  ಅವರು ಭೇಟಿ ಮಾಡಿ ಕಾಸರಗೋಡು ಕನ್ನಡಿಗರ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಲು ಮನವಿ ಸಲ್ಲಿಸಿದ್ದರು.

ಈ ಮನವಿಯಲ್ಲಿ, ರೇಶನ್ ಕಾರ್ಡ್/ಮತದಾರರ ಗುರುತಿನ ಚೀಟಿಗಳಲ್ಲಿ ಕನ್ನಡ ಭಾಷೆ ಅಳವಡಿಕೆ ಸಂಬಂಧಿಸಿದಂತೆ ಕೇರಳ ರಾಜ್ಯದಲ್ಲಿ ಎಲ್ಲಾ ಗುರುತಿನ ಚೀಟಿಗಳು ಮಲಯಾಳಿ ಹಾಗೂ ಇಂಗ್ಲಿಷ್ ಭಾಷೆಯಲ್ಲಿದ್ದು, ಭಾಷಾ ಅಲ್ಪಸಂಖ್ಯಾತರ ಹಿತಾಸಕ್ತಿಗಳನ್ನು ಪರಿಗಣಿಸಿ, ರೇಶನ್ ಕಾರ್ಡ್ ಹಾಗೂ ಗುರುತಿನ ಚೀಟಿಗಳನ್ನು ಮುದ್ರಿಸುವಾಗ ಕನ್ನಡ ಭಾ?ಯನ್ನು ಅಳವಡಿಸುವಂತೆ ಕೋರಲಾಗಿತ್ತು. 

 ಅದರಂತೆ, ಕೇರಳ ಸರ್ಕಾರದ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ಕಾರ್ಯದರ್ಶಿಯವರು ಈ ಬಗ್ಗೆ ಕ್ರಮ ಕೈಗೊಳ್ಳಲು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಆಯುಕ್ತರಿಗೆ ಸೂಚನೆಯನ್ನು ನೀಡಿರುತ್ತಾರೆ ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article