ಬಾಲಕನ ಮೇಲೆ ಬೀದಿ ನಾಯಿ ದಾಳಿ
Friday, November 7, 2025
ಮಂಗಳೂರು: ಮದರಸಕ್ಕೆ ಹೋಗಿ ಮನೆಗೆ ಹಿಂದಿರುಗುತ್ತಿದ್ದ 6 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ ಘಟನೆ ಬಜ್ಪೆ ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೌಹಾರ್ದ ನಗರದಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.
ಸೌಹಾರ್ದ ನಗರದ ನಿವಾಸಿ ಮುಹಮ್ಮದ್ ಅಝರ್ ಅವರ ಪುತ್ರ ಅಹಿಲ್ ಗಾಯಗೊಂಡ ಬಾಲಕ ಎಂದು ತಿಳಿದು ಬಂದಿದೆ.
ಬೆಳಗ್ಗೆ ಮನೆಯ ಸಮೀಪದ ಮದರಸಕ್ಕೆ ತೆರಳಿ ವಾಪಸ್ ಮನೆಗೆ ಮರಳುವ ವೇಳೆ ಏಕಾಏಕಿ ಸುತ್ತುವರಿದ ಬೀದಿ ನಾಯಿಗಳು ಮಗುವಿನ ಕೆನ್ನೆ, ಕೈಗೆ ಕಚ್ಚಿ ಗಂಭೀರ ಗಾಯಗೊಳಿಸಿದೆ ಎಂದು ತಿಳಿದು ಬಂದಿದೆ.