ಪ್ರೇರಣಾ ಸೇವಾ ಟ್ರಸ್ಟ್ ಕಾರ್ಯಾಲಯಕ್ಕೆ ಶಿಲಾನ್ಯಾಸ
ಶಾಸಕ, ಕಟ್ಟಡ ಸಮಿತಿಯ ಅಧ್ಯಕ್ಷ ಉಮಾನಾಥ ಎ. ಕೋಟ್ಯಾನ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಸನಾತನ ಹಿಂದೂ ಧರ್ಮದ ಉಳಿವಿಗಾಗಿಯೇ ಜನ್ಮ ತಾಳಿದ ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ ನೂರು ವರ್ಷಗಳು ತುಂಬುತ್ತಿರುವ ಈ ಸಂದರ್ಭದಲ್ಲಿ ಪ್ರೇರಣಾ ಶಿಶು ಮಂದಿರ ಹಾಗೂ ಶಾಲೆಯ ಪಕ್ಕದಲ್ಲಿಯೇ ಇರುವ 0.25 ಸೆಂಟ್ಸ್ ಜಮೀನಿನಲ್ಲಿ ಸುಮಾರು ಎರಡು ಕೋಟಿ ಅಂದಾಜು ವೆಚ್ಚದಲ್ಲಿ ಟ್ರಸ್ಟಿನ ನೂತನ ಕಾರ್ಯಾಲಯ ನಿರ್ಮಾಣಗೊಳ್ಳಲಿದ್ದು ಮುಂದಿನ ವಿಜಯದಶಮಿಯ ಸಂದಭ೯ ಲೋಕಾರ್ಪಣೆಗೊಳ್ಳಲಿದೆ ಎಂದು ತಿಳಿಸಿದರು.
ಟ್ರಸ್ಟಿನ ಅಧ್ಯಕ್ಷ ವಿವೇಕಾನಂದ ಕಾಮತ್ ಸಭಾಧ್ಯಕ್ಷತೆಯನ್ನು ವಹಿಸಿದ್ದರು.
ಕಟ್ಟಡ ಸಮಿತಿಯ ಕಾಯಾ೯ಧ್ಯಕ್ಷ, ಉದ್ಯಮಿ ಶಶಿಧರ ಶೆಟ್ಟಿ ಬರೋಡಾ ಉಪಸ್ಥಿತರಿದ್ದರು.
ಮೂಕಾಂಬಿಕಾ ಭಟ್ ಪ್ರಾರ್ಥಿಸಿದರು. ಕಟ್ಟಡ ಸಮಿತಿಯ ಕಾರ್ಯದರ್ಶಿ ಮಂಜುನಾಥ ಶೆಟ್ಟಿ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ರೋಹನ್ ಕಲ್ಲಬೆಟ್ಟು ಅವರು ಸಂಘದ ಶತಾಬ್ದಿ ಕಾರ್ಯಕ್ರಮಗಳ ಬಗ್ಗೆ ವಿವರಗಳನ್ನು ನೀಡಿದರು. ಡಾ. ಕೇಶವ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು. ಕೋಶಾಧಿಕಾರಿ ಅಜಿತ್ ಕುಮಾರ್ ವಂದಿಸಿದರು.
