ಸಂತ ಫಿಲೋಮಿನಾ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ
ಕಾಲೇಜಿನ ಉಪಪ್ರಾಂಶುಪಾಲ, ಕನ್ನಡ ವಿಭಾಗದ ಮುಖ್ಯಸ್ಥ ಡಾ. ವಿಜಯ ಕುಮಾರ ಎಂ. ಅವರು ‘ಇಂದು ವಿದ್ಯಾರ್ಥಿಗಳು ಬರವಣಿಗೆಯಲ್ಲಿ ತೊಡಗಿಸಿಕೊಂಡು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡಬೇಕು’ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಸಭಾಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಕಾಲೇಜಿನ ಪ್ರಾಂಶುಪಾಲರಾದ ವಂ. ಡಾ. ಆಂಟನಿ ಪ್ರಕಾಶ್ ಮೋಂತೆರೋ ಮಾತನಾಡಿ, ಕನ್ನಡ ಭಾಷೆಯ ಮೇಲಿನ ಪ್ರೀತಿ ಕೇವಲ ಕನ್ನಡವನ್ನು ಎಲ್ಲೆಡೆ ಕಡ್ಡಾಯಗೊಳಿಸುವುದರಿಂದ ಬರಬೇಕಾದ್ದಲ್ಲ, ಬದಲಿಗೆ ಮನದಾಳದಿಂದ ಬರಬೇಕು ಎಂದ ಅವರು ಕನ್ನಡ ಏಕೀಕರಣ ಕಾರ್ಯದಲ್ಲಿ ಆಲೂರು ವೆಂಕಟರಾಯರ ತ್ಯಾಗವನ್ನು ಸ್ಮರಿಸಿಕೊಂಡರು.
ಮುಂದೆ ಯಕ್ಷ ಕಲಾ ಕೇಂದ್ರದ ವಿದ್ಯಾರ್ಥಿಗಳಿಂದ ಕನ್ನಡ ಭಾವ ಗಾಯನ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರಾದ ಡಾ. ನಾರ್ಬರ್ಟ್ ಮಸ್ಕರೇನಸ್, ಡಾ. ವಿನಯಚಂದ್ರ, ಡಾ. ಎಡ್ವಿನ್ ಡಿಸೋಜ, ಡಾ. ರಾಧಾಕೃಷ್ಣ ಗೌಡ, ಸುರಕ್ಷಾ ಎಸ್. ರೈ, ಧನ್ಯ ಪಿ.ಟಿ. ಉಪಸ್ಥಿತರಿದ್ದರು.
ಸುರಭಿ ಮತ್ತು ಅಪರ್ಣಾ ಪ್ರಾರ್ಥನೆ ನೆರವೇರಿಸಿದರು. ಅತಿಥಿಗಳನ್ನು ದ್ವಿತೀಯ ಬಿಸಿಎ ವಿದ್ಯಾರ್ಥಿನಿ ಅವನಿ ಸ್ವಾಗತಿಸಿ, ಪ್ರಥಮ ಬಿ.ಕಾಂ.ನ ಸನಿಹ ವಂದಿಸಿದರು. ಕನ್ನಡ ವಿಭಾಗದ ಸಹಾಯಕ ಉಪನ್ಯಾಸಕಿ ಪ್ರಶಾಂತಿ ಕಾರ್ಯಕ್ರಮ ನಿರೂಪಿಸಿದರು.

