ಸುಳ್ಯ ತಾಲೂಕು ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ
ಅವರು ಸುಳ್ಯ ತಾಲೂಕು ಪಂಚಾಯಿತಿಯಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಸರಕಾರದ ಯೋಜನೆಗಳನ್ನು ತಾಲೂಕಿನ ಪ್ರತಿಯೊಬ್ಬ ಫಲಾನುಭವಿಗಳಿಗೆ ಸಿಗಬೇಕು. ಇದಕ್ಕಾಗಿ ಅವರಿಗೆ ಮಾಹಿತಿ ನೀಡುವ ಕೆಲಸ ಆಗಬೇಕು. ಇದಕ್ಕಾಗಿ ಪಂಚ ಗ್ಯಾರಂಟಿಗಳಿಗೆ ಸಂಬಂಧಪಟ್ಟು ಇಲಾಖೆಗಳು ಯಶೋಗಾಥೆಯನ್ನು ತಯಾರಿಸುವ ಕೆಲಸ ಮಾಡಬೇಕು ಎಂದು ಹೇಳಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹಮೀದ್ ಕುತ್ತಮೊಟ್ಟೆ ಮಾತನಾಡಿ, ಗೃಹಲಕ್ಷ್ಮಿ ಯೋಜನೆಯಲ್ಲಿ ತಾಲೂಕಿನಲ್ಲಿ ಸಿಗದೆ ಬಾಕಿ ಆಗಿರುವ ಫಲಾನುಭವಿಗಳಿಗೆ ದೊರಕಿಸಲು ಏನು ಕ್ರಮಕೈಗೊಳ್ಳಲಾಗಿದೆ ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಸಿಡಿಪಿಒ ಇಲಾಖೆಯ ಸಿಬ್ಬಂದಿ ಗೃಹಲಕ್ಷ್ಮಿ ಯೋಜನೆಯಡಿ ನವೆಂಬರ್ ಅಂತ್ಯಕ್ಕೆ 26404 ಅರ್ಹ ಫಲಾನುಭವಿಗಳು ನೋಂದಾವಣೆ ಮಾಡಿ ಶೇ 95.18 ಪ್ರಗತಿಯಾಗಿದೆ. ನವೆಂಬರ್ ತಿಂಗಳಲ್ಲಿ 11 ಹೊಸ ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದಾರೆ. ಆಧಾರ್ ಲಿಂಕ್ ಆಗದೇ ಇರುವ ಫಲಾನುಭವಿಗಳಲ್ಲಿ 38 ಮಂದಿಗೆ ಆಧಾರ್ ಲಿಂಕ್ ಆಗಿದೆ. ಇದರಲ್ಲಿ 22 ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಿದೆ ಎಂದು ಮಾಹಿತಿ ನೀಡಿದರು.
ಸರಕಾರದಿಂದ ಪಡಿತರ ಕಿಟ್ಗಳ ವಿತರಣೆ ಮುಂದಿನ ದಿನಗಳಲ್ಲಿ ನಡೆಯಲಿದೆ. ಈ ಕಿಟ್ಗಳ ಬರುವ ಮೊದಲು ಆಯಾಯ ಭಾಗದ ಸದಸ್ಯರ ಗಮನಕ್ಕೆ ತಂದು ಕಿಟ್ ವಿತರಣೆ ಕಾರ್ಯಕ್ರಮ ಮಾಡುವ ಉದ್ದೇಶವಿದೆ. ಇಲಾಖೆ ಇದರ ಬಗ್ಗೆ ಗಮನ ಹರಿಸಬೇಕು ಎಂದು ಇ.ಒ ರಾಜಣ್ಣ ಸೂಚನೆ ನೀಡಿದರು.
ಬೆಳ್ಳಾರೆಯಿಂದ ಸುಳ್ಯಕ್ಕೆ ಬರುವ 33ಕೆವಿ ವಿದ್ಯುತ್ ಲೈನ್ ಯಾವ ಹಂತದಲ್ಲಿದೆ ಎಂದು ತಾ.ಪಂ. ಇ.ಒ ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಮೆಸ್ಕಾಂ ಇಲಾಖೆಯ ಸಿಬ್ಬಂದಿ ಬೆಳ್ಳಾರೆಯಿಂದ 33ಕೆವಿ ವಿದ್ಯುತ್ ಲೈನ್ ಸಂಪರ್ಕ ಪೈಚಾರ್ವರೆಗೆ ಆಗಿದೆ. ಪೈಚಾರಿನಿಂದ ಸುಳ್ಯದವರೆಗೆ ಕಾಮಗಾರಿ ನಡೆಯಬೇಕಿದೆ ಎಂದರು.
ಶಕ್ತಿ ಯೋಜನೆಯಲ್ಲಿ ಕೆಲವು ಕಡೆ ಹೊಸ ರೂಟ್ಗಳು ಆಗಿದೆ. ಕಲ್ಮಕಾರ್, ಮಡಪ್ಪಾಡಿ, ಪೇರಾಲು, ಕಂದ್ರಪ್ಪಾಡಿ ಮೊದಲಾದ ಕಡೆ ಬಸ್ ಸಂಪರ್ಕ ಆಗಿದೆ. ತೊಡಿಕಾನದ ಬಸ್ ರೂಟ್ಗೆ ಪ್ರಸ್ತಾವನೆ ಕಳಿಸಲಾಗಿದೆ ಎಂದು ಕೆಎಸ್ಆರ್ಟಿಸಿಯ ಸಿಬ್ಬಂದಿ ಹೇಳಿದರು.
ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರು, ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.