ಮಾತಿನಿಂದ ಪರಿವರ್ತನೆ ಸಾಧ್ಯವಿಲ್ಲ, ಕಾಯಕದಿಂದ ಮಾತ್ರ ಪರಿಣಾಮಕಾರಿ ಧನಾತ್ಮಕ ಸುಧಾರಣೆ ಸಾಧ್ಯ: ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ

ಮಾತಿನಿಂದ ಪರಿವರ್ತನೆ ಸಾಧ್ಯವಿಲ್ಲ, ಕಾಯಕದಿಂದ ಮಾತ್ರ ಪರಿಣಾಮಕಾರಿ ಧನಾತ್ಮಕ ಸುಧಾರಣೆ ಸಾಧ್ಯ: ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ


ಉಜಿರೆ: ಉಜಿರೆ ಬರೆ ಬಾಯಿಮಾತಿನಿಂದ ಪರಿವರ್ತನೆ  ಸಾಧ್ಯವಿಲ್ಲ. ಆದುದರಿಂದ ಕಾಯಕದ ಬಗ್ಯೆ ಮಾತು, ಉಪನ್ಯಾಸ ಅಗತ್ಯವಿಲ್ಲ. ಮಾತಿನಲ್ಲಿ ಹೇಳುವುದನ್ನು ಕಾಯಕದಲ್ಲಿ ಮಾಡಿ ತೋರಿಸಬೇಕು ಎಂದು ಬೆಳಗಾವಿ ಜಿಲ್ಲೆ ಹುಕ್ಕೇರಿಯ ಹಿರೇಮಠದ ಗುರು ಶಾಂತೇಶ್ವರ ಸಂಸ್ಥಾನದ ಪೂಜ್ಯ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಅವರು ಗುರುವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ 2000ನೆ ಮದ್ಯವರ್ಜನ  ಶಿಬಿರದ ಸಾವಿರಾರು  ಮದ್ಯವರ್ಜಿತರ ಸಮಾವೇಶದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು.


ಧರ್ಮಸ್ಥಳದ  ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಎಲ್ಲವನ್ನೂ ಮಾತಿನಲ್ಲಿ ಹೇಳದೆ ಕೃತಿ ಮೂಲಕ, ಕಾಯಕದ ಮೂಲಕ ಕ್ರಾಂತಿಕಾರಿ ಪರಿವರ್ತನೆ ಮಾಡಿ ತೋರಿಸಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಕ್ರಾಂತಿಕಾರಿ ಪರಿವರ್ತನೆ ಮಾಡಿ ತೋರಿಸಿದ್ದಾರೆ. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರು ಕನಸು ಕಂಡಿದ್ದ ಗ್ರಾಮರಾಜ್ಯದ ಮೂಲಕ ರಾಮರಾಜ್ಯದ ಕಲ್ಪನೆಯನ್ನು ಸಾಕಾರಗೊಳಿಸಿದ್ದಾರೆ ಎಂದರು. 

ಉದ್ಘಾಟಿಸಿದ ಕರ್ನಾಟಕರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಶರಣಪ್ಪ ಸಲದಾಪುರ, ಆಚಾರವೇ ಸ್ವರ್ಗ, ಅನಾಚರವೇ ನರಕ ಎಂದು ಬಸವಣ್ಣ ಹೇಳಿದ ವಚನ ಸದಾ ನಾವು ನೆನಪಿನಲ್ಲಿಟ್ಟು ಸತ್ಕಾರ್ಯಗಳನ್ನೇ ಮಾಡಬೇಕು. ಎಲ್ಲರೂ ಜಾಗೃತರಾಗಿ ಅನ್ಯಾಯ, ಅತ್ಯಾಚಾರ ತಡೆಗಟ್ಟಬೇಕು. ಇಷ್ಟು ದೊಡ್ಡ ಸಂಖ್ಯೆಯ ಮದ್ಯಮುಕ್ತರನ್ನು ಒಂದೇ ಕಡೆ ನೋಡುವುದೇ ಪುಣ್ಯದ ಕಾಯಕವಾಗಿದೆ. ಎಲ್ಲರನ್ನೂ ಮನೆಯ ಮಕ್ಕಳಂತೆ ಪ್ರೀತಿ-ವಿಶ್ವಾಸದಿಂದ ಸೇವಾಕಾರ್ಯ ಮಾಡುವ ಕಾಯಕವನ್ನು ಅವರು ಶ್ಲಾಘಿಸಿ ಅಭಿನಂದಿಸಿದರು.

ಪ್ರಾಥಮಿಕ ಮತ್ತು ಪ್ರೌಢಶಾಲಾ ಪಠ್ಯದಲ್ಲಿ ಸಾಮಾಜಿಕ ಪಿಡುಗುಗಳು ಹಾಗೂ ದುಶ್ಚಟಗಳ ಬಗ್ಯೆ ಅರಿವು, ಜಾಗೃತಿ ಮೂಡಿಸುವ ನೀತಿಪಾಠಗಳನ್ನು ಅಳವಡಿಸಬೇಕು. ಈ ಬಗ್ಯೆ ತಾವು ಕೂಡಾ ಸರ್ಕಾರದಲ್ಲಿ ಒತ್ತಾಯಿಸುವುದಾಗಿ ಹೇಳಿದರು. ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಅನಧಿಕೃತ ಹಾಗೂ ನಕಲಿ ಮದ್ಯ ಮಾರಾಟ ತಡೆಗಟ್ಟಬೇಕು ಎಂದು ಅವರು ಸಲಹೆ ನೀಡಿದರು.

ಯಾವುದೇ ಪದವಿ, ಸ್ಥಾನ-ಮಾನಕ್ಕಿಂತ ಮಾನವೀಯಮೌಲ್ಯಗಳಿಗೆ ಹೆಚ್ಚಿನ ಮಾನ್ಯತೆ ನೀಡಬೇಕು ಎಂದು ಅವರು ಹೇಳಿದರು.

ವೀಡಿಯೊ ಬಿಡುಗಡೆಗೊಳಿಸಿದ ಹೇಮಾವತಿ ವೀ. ಹೆಗ್ಗಡೆ ಮಾತನಾಡಿ, ಯಾರಿಗೂ ಬೇಡದವರಾಗಿ, ಕೀಳರಿಮೆ ಹೊಂದಿದ ಮದ್ಯವ್ಯಸನಿಗಳನ್ನು ವ್ಯಸನಮುಕ್ತರಾಗಿ ಪವಾಡ ಸದೃಶದಲ್ಲಿ ಪರಿವರ್ತನೆಗೊಳಿಸುವ ಕಾರ್ಯಕರ್ತರ ಯಶೋಗಾಥೆ ಅದ್ಭುತವಾಗಿದೆ ಎಂದರು.

ಮದ್ಯವ್ಯಸನಿಗಳನ್ನು ವ್ಯಸನಮುಕ್ತರಾಗಿ ಮನ ಒಲಿಸಿದ ನವಜೀವನ ಸಮಿತಿ ಸದಸ್ಯರನ್ನು “ಜಾಗೃತಿ ಮಿತ್ರ” ಮತ್ತು “ಜಾಗೃತಿ ಅಣ್ಣ” ಪ್ರಶಸ್ತಿ ನೀಡಿ ಗೌರವಿಸಲಾಯಿತು. ಡಿ. ಹರ್ಷೇಂದ್ರ ಕುಮಾರ್ ಸ್ಮರಣಸಂಚಿಕೆ ಬಿಡುಗಡೆಗೊಳಿಸಿದರು. ಪಾನಮುಕ್ತರ ಪರವಾಗಿ ವಿಜಯನಗರ ಜಿಲ್ಲೆಯ ಕೂಡ್ಲಿಗಿ ಶಿಕ್ಷಕ ಸತ್ಯಮೂರ್ತಿ ಮತ್ತು ರಾಮದುರ್ಗದ ಸುವರ್ಣಬಸವರಾಜ್ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.

ಬೆಂಗಳೂರು ಕ್ಷೇಮವನದ ಸಿ.ಇ.ಒ. ಶ್ರದ್ಧಾ ಅಮಿತ್ ಉಪಸ್ಥಿತರಿದ್ದರು. ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಶುಭಾಶಂಸನೆ ಮಾಡಿದರು.

ಅಖಿಲಕರ್ನಾಟಕ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ. ವಸಂತ ಸಾಲ್ಯಾನ್ ಮತ್ತು ಸಮಾಜ ಸೇವಕ ಮುಂಬೈನ ಆರ್.ಬಿ. ಹೆಬ್ಬಳ್ಳಿ ಅವರನ್ನು ಗೌರವಿಸಲಾಯಿತು. ಮಾಣಿಲದ ಶ್ರೀ ಮೋಹನದಾಸ ಸ್ವಾಮೀಜಿ ಉಪಸ್ಥಿತರಿದ್ದರು.

ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ಆಶಯ ನುಡಿಗಳ ಹೇಳಿ ಶುಭ ಹಾರೈಸಿದರು. ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಭವ್ಯ ಮೆರವಣಿಗೆಗೆ ಚಾಲನೆ ನೀಡಿ ಶುಭ ಹಾರೈಸಿದರು.

ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಮದ್ಯವರ್ಜಿತರು ಸಂಯಮ ಮತ್ತು ದೃಢ ಸಂಕಲ್ಪದಿಂದ ಮುಂದೆ ಯಾವುದೇ ಆಕರ್ಷಣೆ, ಒತ್ತಡಕ್ಕೆ ಒಳಗಾಗದೆ ಉತ್ತಮ ಜೀವನ ನಡೆಸಬೇಕು ಎಂದು ಸಲಹೆ ನೀಡಿದರು.

ಪ್ರಾಸ್ತಾವಿಕ ಮಾತುಗಳೊಂದಿಗೆ ಜನಜಾಗೃತಿ ವೇದಿಕೆಯ ಕಾರ್ಯದರ್ಶಿ ವಿವೇಕ್ ವಿ. ಪಾಸ್ ಸ್ವಾಗತಿಸಿದರು. ಜನಜಾಗೃತಿ ವೇದಿಕೆಯ ರಾಜ್ಯ ಸಂಘಟನಾ ಅಧ್ಯಕ್ಷ ನಟರಾಜ್ ಬಾದಾಮಿ ವಂದಿಸಿದರು.

ಯೋಜನಾಧಿಕಾರಿಗಳಾದ ಗಣೇಶ್ ಆಚಾರ್ಯ ಮತ್ತು ಭಾಸ್ಕರ್ ಎನ್. ಕಾರ್ಯಕ್ರಮ ನಿರ್ವಹಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article