ರಸ್ತೆ ದಾಟುವಾಗ ಕಾರು ಢಿಕ್ಕಿ: ಮಗು ಸಾವು
Wednesday, December 3, 2025
ಬೆಳ್ತಂಗಡಿ: ಮನೆಯ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ ಹೊಡೆದು ಮೂರು ವರ್ಷದ ಮಗು ಮೃತಪಟ್ಟಿರುವ ಘಟನೆ ಡಿ.3ರಂದು ಚಾರ್ಮಾಡಿಯಲ್ಲಿ ಸಂಭವಿಸಿದೆ.
ಮೃತ ಬಾಲಕನನ್ನು ಚಾರ್ಮಾಡಿ ಗ್ರಾಮ ಪಂಚಾಯತ್ ಸದಸ್ಯ ಬೀಟಿಗೆ ನಿವಾಸಿ ಸಿದ್ದಿಕ್ ಯು.ಪಿ ಅವರ ಮೂರು ವರ್ಷದ ಪುತ್ರ ಮುಹಮ್ಮದ್ ಹಝೀರಿನ್ ಎಂದು ಗುರುತಿಸಲಾಗಿದೆ.
ಮೃತ ಬಾಲಕ ತನ್ನ ಮನೆಯ ಬಳಿಯ ಅಂಗಡಿಗೆ ತಿಂಡಿ ತರಲು ಹೋಗಿ, ಹಿಂದಿರುಗುವಾಗ ರಸ್ತೆ ದಾಟಲು ಪ್ರಯತ್ನಿಸುವ ವೇಳೆ ಕಾರು ಢಿಕ್ಕಿ ಹೊಡೆದಿದೆ. ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.