ನಕಲಿ ಚಿನ್ನ ನೀಡಿ ಮೋಸ: ಓರ್ವನ ಬಂಧನ

ನಕಲಿ ಚಿನ್ನ ನೀಡಿ ಮೋಸ: ಓರ್ವನ ಬಂಧನ

ಕುಂದಾಪುರ: ರಾಯಚೂರು ಜಿಲ್ಲೆಯ ಗೋಪಾಲ ಎಂಬವರಿಗೆ ಕಡಿಮೆ ಬೆಲೆಗೆ ಚಿನ್ನ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ.ವಂಚಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಜಯಪ್ರಕಾಶ್ ಡಿ. ಬಂಧಿತ ಆರೋಪಿ.

ಸಿದ್ದಾಪುರದ ಕಮಲಶಿಲೆ ರಸ್ತೆಯಲ್ಲಿ ಆರೋಪಿಗಳು ಗೋಪಾಲ ಎಂಬವರಿಗೆ 150 ಗ್ರಾಂ ಚಿನ್ನವೆಂದು  ಹೇಳಿ 5 ಲಕ್ಷ ರೂ. ಪಡೆದುಕೊಂಡು ನಕಲಿ ಚಿನ್ನ ನೀಡಿ ಪರಾರಿಯಾಗಿದ್ದರು. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಬಗ್ಗೆ ತನಿಖೆ ಕೈಗೊತ್ತಿಕೊಂಡಿದ್ದ ಪೊಲೀಸರು ಆರೋಪಿಯನ್ನು ಬಂಧಿಸಿ ಆತನಿಂದ 4,50,000 ರೂ. ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ ಸುಮಾರು 10,00,000 ರೂ. ಮೌಲ್ಯದ ಕಾರನ್ನು ವಶಪಡಿಸಿಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article