ರಾಜಕೀಯ ಚರ್ಚೆಯಾಗಿಲ್ಲ, ಕರೆದರೆ ದೆಹಲಿಗೆ ಹೋಗುವೆ..
Wednesday, December 3, 2025
ಮಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರೊಂದಿಗೆ ರಾಜಕೀಯ ಚರ್ಚೆಯಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ನಗರದಲ್ಲಿ ಇಂದು ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.
ಕರೆದರೆ ಮಾತ್ರ ದೆಹಲಿಗೆ..
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ದೆಹಲಿಗೆ ಪ್ರಯಾಣ ಬೆಳೆಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರು ಹೋಗುವುದಕ್ಕೆ ಯಾರೂ ಬೇಡ ಅಂದಿಲ್ಲ. ನೀವು ದೆಹಲಿಗೆ ಹೋಗುತ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ನಾನು ಹೋಗುವುದಿಲ್ಲ. ನನ್ನನು ಕರೆದರೆ ಮಾತ್ರ ದೆಹಲಿಗೆ ತೆರಳುವೆ ಎಂದರು.