ಬ್ರಹ್ಮಕುಮಾರೀಸ್ ವತಿಯಿಂದ ಉಚಿತ ಆಯುಷ್ ಚಿಕಿತ್ಸಾ ಶಿಬಿರ

ಬ್ರಹ್ಮಕುಮಾರೀಸ್ ವತಿಯಿಂದ ಉಚಿತ ಆಯುಷ್ ಚಿಕಿತ್ಸಾ ಶಿಬಿರ


ಮಂಗಳೂರು: ಪ್ರಜಾಪಿತ ಬ್ರಹ್ಮಕುಮಾರೀಸ್ ಈಶ್ವರೀಯ ವಿಶ್ವವಿದ್ಯಾಲಯ ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಆಯುಷ್ ಇಲಾಖೆ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಡಿ.21 ರಂದು ಉಚಿತ ಆಯುಷ್ ಚಿಕಿತ್ಸಾ ಶಿಬಿರ ನಡೆಯಿತು.

ಬ್ರಹ್ಮಕುಮಾರಿ ವಿಶ್ವೇಶ್ವರಿ ಮಾತನಾಡಿ, ಭಾರತೀಯ ಚಿಕಿತ್ಸಾ ಪದ್ಧತಿಗಳ ಮೂಲಕ ಸಮಾಜದ ಆರೋಗ್ಯ ಸುಧಾರಣೆ ಉದ್ದೇಶದಿಂದ ಈ ರೀತಿಯ ಶಿಬಿರಗಳನ್ನು ಮುಂದುವರಿಸಲಾಗುವುದು ಎಂದು ತಿಳಿಸಿದರು.

ಮಂಗಳೂರಿನ ಉರ್ವ ಸ್ಟೋರ್ಸ್ ಬ್ರಹ್ಮಕುಮಾರೀಸ್ ಕೇಂದ್ರದಲ್ಲಿ ನಡೆದ ಈ ಶಿಬಿರದಲ್ಲಿ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. 250 ಜನ ಭಾಗವಹಿಸಿ ಆಯುಷ್ ಕಿಟ್ ಪಡೆದರು. ಆಯುರ್ವೇದ, ಹೋಮಿಯೋಪತಿ ಹಾಗೂ ಯೋಗ ಚಿಕಿತ್ಸೆಗಳ ಮೂಲಕ ಅನೇಕ ನಾಗರಿಕರಿಗೆ ಉಚಿತ ಆರೋಗ್ಯ ತಪಾಸಣೆ, ಚಿಕಿತ್ಸೆ ಮತ್ತು ಆರೋಗ್ಯ ಜಾಗೃತಿ ಸಲಹೆ ನೀಡಲಾಯಿತು.

ಶಿಬಿರದಲ್ಲಿ ಮಂಗಳೂರಿನ ಸರ್ಕಾರಿ ಆಯುಷ್ ಮತ್ತು ಹೋಮಿಯೋಪತಿ ಸಂಯುಕ್ತ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಹೇಮಲತಾ ಪಿ., ಗುರುಪುರದ ಸರ್ಕಾರಿ ಹೋಮಿಯೋಪತಿ ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ. ಶ್ರೇಣಿ, ಮಂಗಳೂರಿನ ಸರ್ಕಾರಿ ಆಯುಷ್ ಮತ್ತು ಹೋಮಿಯೋಪತಿ ಸಂಯುಕ್ತ ಆಸ್ಪತ್ರೆಯ ತಜ್ಞ ವೈದ್ಯ ಡಾ. ಬಸವರಾಜ, ತಜ್ಞ ವೈದ್ಯ ಡಾ. ಹೇಮಂತ್ ಕುಮಾರ್ ಪಿ., ಸರ್ಕಾರಿ ಆಯುಷ್ ಮತ್ತು ಹೋಮಿಯೋಪತಿ ಸಂಯುಕ್ತ ಆಸ್ಪತ್ರೆಯ ತಜ್ಞ ವೈದ್ಯ ಡಾ. ಶ್ರೀನಿವಾಸ್ ಪಿ., ಸರ್ಕಾರಿ ಆಯುಷ್ ಮತ್ತು ಹೋಮಿಯೋಪತಿ ಸಂಯುಕ್ತ ಆಸ್ಪತ್ರೆಯ ಫಾರ್ಮಸಿಸ್ಟ್/ ಹಿರಿಯ ವಿತರಕಿ ಅನಿತಾ ಉಪಸ್ಥಿತರಿದ್ದರು.

ಶಿಬಿರದ ಯಶಸ್ಸಿಗೆ ಸಹಕರಿಸಿದ ಎಲ್ಲಾ ವೈದ್ಯರು, ಸಿಬ್ಬಂದಿ, ಸ್ವಯಂಸೇವಕರು ಹಾಗೂ ಸಾರ್ವಜನಿಕರಿಗೆ ಕೃತಜ್ಞತೆ ಸಲ್ಲಿಸಿ ಇವರು ಧ್ಯಾನ ಮಾಡಿಸಿದರು. ಬ್ರಹ್ಮಕುಮಾರಿ ಪ್ರಭಾ ಇವರು ಸಭಾ ಕಾರ್ಯಕ್ರಮ ನಿರ್ವಹಿಸಿದರು. ಜಯಕ್ಕ ಸ್ವಾಗತಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article