ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರು ಜಿಲ್ಲೆಗೆ

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರು ಜಿಲ್ಲೆಗೆ

ಮಂಗಳೂರು: ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ  ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ.ಟಿ. ಡಿ.29 ಮತ್ತು 30ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

29ರಂದು ಬೆಳಿಗ್ಗೆ 11- ಆಯೋಗದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಮತ್ತು ನಗರ ಪುನರ್ವಸತಿ ಕಾರ್ಯಕರ್ತರಿಗೆ ಏರ್ಪಾಡಿಸಿರುವ ತರಬೇತಿ ಕಾರ್ಯಕ್ರಮ, ಮಧ್ಯಾಹ್ನ 2.30- ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧಿಕಾರಿಗಳೊಂದಿಗೆ (ಜಿಲ್ಲೆ ಹಾಗೂ ತಾಲೂಕು ಮಟ್ಟ) " ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆ -2009’ರ ಅನುಷ್ಠಾನದ ಪ್ರಗತಿ ಪರಿಶೀಲನೆ. 30 ರಂದು ಬೆಳಗ್ಗೆ 11-ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಯೋಗದ ವತಿಯಿಂದ ಏರ್ಪಡಿಸಿರುವ ಮಕ್ಕಳೊಂದಿಗೆ ಸಂವಾದ ಕಾರ್ಯಕ್ರಮ, ಮಧ್ಯಾಹ್ನ 2.30- ಕಾರ್ಮಿಕ ಇಲಾಖೆಯ ಅಧಿಕಾರಿಗಳೊಂದಿಗೆ ಮಕ್ಕಳು ಮತ್ತು ಹದಿಹರೆಯದವರ ಕಾರ್ಮಿಕ ಪದ್ಧತಿ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ-1986 ರ ಅನುಷ್ಠಾನದ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article