ಮೈಸೂರು ಅಪಘಾತ: ಸುಳ್ಯದ ಯುವಕ ಸಾವು

ಮೈಸೂರು ಅಪಘಾತ: ಸುಳ್ಯದ ಯುವಕ ಸಾವು

ಮಂಗಳೂರು: ಮೈಸೂರು ಬಳಿಯ ಮಳವಳ್ಳಿಯಲ್ಲಿ ಶುಕ್ರವಾರ ಮುಂಜಾನೆ ಅಪರಿಚಿತ ವಾಹನವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸುಳ್ಯದ ಯುವಕನೊಬ್ಬ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾನೆ. 

ಮೃತನನ್ನು ಸುಳ್ಯದ ಉಬರಡ್ಕ ಮಿತ್ತೂರು ಗ್ರಾಮದ ಕಲ್ತಾರ್ ನಿವಾಸಿ ಶೇಷಪ್ಪ ನಾಯಕ್ ಅವರ ಪುತ್ರ ದೀಕ್ಷಿತ್ (25) ಎಂದು ಗುರುತಿಸಲಾಗಿದೆ. ದೀಕ್ಷಿತ್ ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದು, ಬೆಂಗಳೂರಿನಿಂದ ಕಂದಡ್ಕದ ಕಲ್ತಾರ್ನಲ್ಲಿರುವ ತನ್ನ ಊರಿಗೆ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದರು. ಮೈಸೂರಿಗೆ ಸಮೀಪದ ಮಳವಳ್ಳಿ ಬಳಿ ಅವರು ಸವಾರಿ ಮಾಡುತ್ತಿದ್ದಾಗ, ಅಪರಿಚಿತ ವಾಹನವೊಂದು ಅವರ ಬೈಕ್ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿದೆ.

ಅಪಘಾತದಲ್ಲಿ ದೀಕ್ಷಿತ್ ಅವರಿಗೆ ತೀವ್ರ ಗಾಯಗಳಾಗಿದ್ದು, ಸ್ಥಳೀಯರು ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಅವರು ಮೃತಪಟ್ಟಿದ್ದಾರೆ. ಅವರು ತಂದೆ, ತಾಯಿ ಮತ್ತು ಸಹೋದರನನ್ನು ಅಗಲಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article