ಲೋಕ ಅದಾಲತ್‌ನಲ್ಲಿ ಒಂದಾದ ದಂಪತಿಗಳು

ಲೋಕ ಅದಾಲತ್‌ನಲ್ಲಿ ಒಂದಾದ ದಂಪತಿಗಳು

ಮಂಗಳೂರು: ವಿಚ್ಛೇದನಕ್ಕೆ ನಿರ್ಧರಿಸಿದ್ದ ಎರಡು ಜೋಡಿ ಮತ್ತೆ ಒಂದಾದ ವಿದ್ಯಮಾನಕ್ಕೆ ದ.ಕ. ಜಿಲ್ಲಾ ನ್ಯಾಯಾಲಯದಲ್ಲಿ ಶನಿವಾರ ನಡೆದ ಲೋಕ ಅದಾಲತ್ ಸಾಕ್ಷಿಯಾಯಿತು.

ಈ ಎರಡೂ ಜೋಡಿಗಳ ದಾಂಪತ್ಯ ಜೀವನದಲ್ಲಿ ಯಾವುದೋ ಕಾರಣಕ್ಕೆ ಮನಸ್ತಾಪ ಉಂಟಾಗಿತ್ತು. ಹಾಗಾಗಿ ಎರಡೂ ಜೋಡಿಗಳು ವಿಚ್ಛೇದನ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ವೇಳೆ ಪ್ರಕರಣವನ್ನು ನ್ಯಾಯಾಲಯದ ಮಧ್ಯಸ್ಥಿಕೆ ಕೇಂದ್ರದ ಮೂಲಕ ಸರಿಪಡಿಸಲು ಪ್ರಯತ್ನ ನಡೆಯಿತು.

ಪತಿ ಮತ್ತು ಪತ್ನಿಯ ಮಧ್ಯೆ ಸಂಧಾನ ಏರ್ಪಡಿಸಿ ಮತ್ತೆ ಒಗ್ಗೂಡಿ ದಾಂಪತ್ಯ ಜೀವನ ಮುಂದುವರಿಸುವ ಬಗ್ಗೆ ಮನವರಿಕೆ ಮಾಡಿ ಕೊಡಲಾಗಿತ್ತು. ಸಂಧಾನದ ಬಳಿಕ ಈ ದಂಪತಿಗಳು ಮತ್ತೆ ಒಗ್ಗೂಡಿ ಜೀವನ ಮುಂದುವರಿಸಲು ಒಪ್ಪಿಕೊಂಡರು. ಅದರಂತೆ ಶನಿವಾರ ಲೋಕ ಅದಾಲತ್‌ಗೆ ಆಗಮಿಸಿದ್ದ ಎರಡೂ ಜೋಡಿಗಳು ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶ ಲಕ್ಷ್ಮಿನಾರಾಯಣ ಭಟ್ ಕೆ. ಸಮಕ್ಷಮದಲ್ಲಿ ಪರಸ್ಪರ ಹಾರ ಬದಲಾಯಿಸುವ ಮೂಲಕ ಒಂದಾದರು.

ಈ ಸಂದರ್ಭ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಬುನ್ನೀಸಾ, ವಿವಿಧ ನ್ಯಾಯಾಲಯಗಳ ನ್ಯಾಯಾಧೀಶರು ಮತ್ತು ವಕೀಲರು ಅಪೂರ್ವ ಕ್ಷಣಕ್ಕೆ ಸಾಕ್ಷಿಯಾದರು.

ಲೋಕ ಅದಾಲತ್ ಅಧಿವೇಶನದಲ್ಲಿ ಭಾಗವಹಿಸಿದ್ದ ಎರಡೂ ಜೋಡಿಗಳು ಮತ್ತೆ ಒಂದಾಗುವ ಮೂಲಕ ತಮ್ಮ ವಿಚ್ಛೇದನದ ಹೋರಾಟವನ್ನು ಕೊನೆಗೊಳಿಸಿರುವುದು ಸಮಾಜಕ್ಕೆ ಮಾದರಿಯಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಬುನ್ನೀಸಾ ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article