‘ವಿಕಸಿತ ಮಂಗಳೂರು’ ನಿರ್ಮಾಣಕ್ಕೆ ಬದ್ಧರಾಗೋಣ: ಕ್ಯಾ. ಬ್ರಿಜೇಶ್ ಚೌಟ
ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ಅಧ್ಯಕ್ಷರಾದ ಚಿತ್ತರಂಜನ್ ಅವರು ದೀಪಪ್ರಜ್ವಲನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ, ಕಟೀಲು ದುರ್ಗಾಪರಮೇಶ್ವರಿ ದೇವಳದ ಅರ್ಚಕ ಅನಂತ ಪದ್ಮನಾಭ ಅಸ್ರಣ್ಣ ಶುಭ ಹಾರೈಸಿದರು.
ಕ್ಯಾ. ಗಣೇಶ್ ಕಾರ್ಣಿಕ್, ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷರಾದ ತುಕರಾಮ್ ಪೂಜಾರಿ, ವಿಧಾನ ಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ, ಸುನಿಲ್ ಆಚಾರ್, ವಿನೋದ್ ಶೆಣೈ, ಪ್ರಸಾದ್ ಕುಮಾರ್ ಶೆಟ್ಟಿ, ಜಯಾನಂದ್ ಅಂಚನ್, ಕದ್ರಿ ನವನೀತ್ ಶೆಟ್ಟಿ, ಅನಿಲ್ ಕುಮಾರ್, ಮನೋಹರ್ ಜೋಷಿ, ಕಿರಣ್ ಕುಮಾರ್ ಕೋಡಿಕಲ್, ಶಕೀಲಾ ಖಾವ, ಸಂಧ್ಯಾ ಅಚಾರ್, ಶೋಭಾ ರಾಜೇಶ್, ಹೆಚ್.ಕೆ ಪುರುಷೋತ್ತಮ, ಪ್ರದೀಪ್ ಕುಮಾರ್ ಕಲ್ಕೂರ, ಗೋಪಾಲ್ ಕುತ್ತಾರ್ ಮುಂತಾದವರು ಉಪಸ್ಥಿತರಿದ್ದರು.
ಕಂಬಳದ ನೆಲದಲ್ಲಿ ವಂದೇ ಮಾತರಂ:
ವಂದೇ ಮಾತರಂ ಗೀತೆಗೆ 150 ವರ್ಷ ತುಂಬಿದ ಸಂಭ್ರಮಕ್ಕಾಗಿ, ಶ್ವೇತವಸ್ತ್ರ ಧರಿಸಿದ 150 ವಿದ್ಯಾರ್ಥಿನಿಯರು ಕೆಸರು ಗದ್ದೆಯ ಬದಿಯಲ್ಲಿ ನಿಂತು ಏಕಕಂಠದಿಂದ ಈ ಗೀತೆಯನ್ನು ಹಾಡತೊಡಗಿದಾಗ ಇಡೀ ಪರಿಸರವೇ ದೇಶಭಕ್ತಿಯನ್ನು ಮೊಳಗಿಸುವಂತೆ ಮಾಡಿತು.ತುಳುನಾಡಿನ ಮಣ್ಣಿನ ವಾಸನೆ ಮತ್ತು ತಾಯಿ ಭಾರತಾಂಬೆಯ ಸ್ತುತಿ ಒಂದಾದ ಆ ಕ್ಷಣ, ನೆರೆದಿದ್ದ ಪ್ರತಿಯೊಬ್ಬರ ಮೈ-ಮನಗಳಲ್ಲಿ ದೇಶಪ್ರೇಮದ ಅಲೆ ಎಬ್ಬಿಸಿತು. ಜಾನಪದ ಕ್ರೀಡೆಯ ಅಬ್ಬರದ ನಡುವೆ ಕೇಳಿಬಂದ ಆ ಸುಮಧುರ ಗಾಯನ, ನಮ್ಮ ಮಣ್ಣಿನ ಸಂಸ್ಕೃತಿ ಮತ್ತು ರಾಷ್ಟ್ರೀಯತೆಯ ಅಪೂರ್ವ ಸಂಗಮವಾಗಿ ’ನವ ವೈವಿಧ್ಯ’ದ ಶ್ರೇಷ್ಠತೆಯನ್ನ ಸಾರಿತು.
ನವವಿಧ-ನವವರ್ಷ:
ವೀರ ವನಿತೆ ರಾಣಿ ಅಬ್ಬಕ್ಕ ಚರಿತ್ರೆಯ ಚಿತ್ರಕಲಾ ಪ್ರದರ್ಶನ, ಪ್ರಧಾನಿಯವರ ’ಏಕ್ ಪೆಡ್ ಮಾ ಕೆ ನಾಮ್’ ಅಭಿಯಾನದಡಿ ಗಿಡಗಳ ವಿತರಣೆ, ’ಬ್ಯಾಕ್ ಟು ಊರು’ ಉದ್ಯಮಿಗಳಿಗೆ ಸನ್ಮಾನ ಹಾಗೂ ವೃದ್ಧಾಶ್ರಮದ ಹಿರಿಯ ಚೇತನಗಳೊಂದಿಗೆ ಸಂಭ್ರಮ ಹಂಚಿಕೊಳ್ಳುವ ೫ ವಿಶಿಷ್ಟ ಚಟುವಟಿಕೆಗಳು ಈ ಬಾರಿಯ ಮಂಗಳೂರು ಕಂಬಳದ ವಿಶೇಷ. ಇದರೊಂದಿಗೆ ಮಕ್ಕಳಿಗಾಗಿ ’ರಂಗ್ ದ ಕೂಟ’ ಚಿತ್ರಕಲೆ, ಫೋಟೋಗ್ರಫಿ, ರೀಲ್ಸ್ ಹಾಗೂ ತಾಂತ್ರಿಕತೆಯ ಮೆರುಗು ನೀಡುವ 'AI ಕ್ರಿಯೇಟಿವ್ ಯೋಧ’ ಸೇರಿದಂತೆ ನಾಲ್ಕು ವೈವಿಧ್ಯಮಯ ಸ್ಪರ್ಧೆಗಳು ಕಂಬಳದ ಗತ್ತು-ಗಮ್ಮತ್ತನ್ನು ಮತ್ತಷ್ಟು ಹೆಚ್ಚಿಸಿತ್ತು.
