ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಬಹುಮಾನ ವಿತರಣಾ ಸಮಾರಂಭ
ಮೂಡುಬಿದಿರೆಯ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ಹಾಗೂ ಕಲಾ ವಿಭಾಗದ ವಿದ್ಯಾರ್ಥಿಗಳ ವಾರ್ಷಿಕ ಬಹುಮಾನ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡುತ್ತಿದ್ದರು.
ರಾಮಕೃಷ್ಣ ಮಿಷನ್ನ ಸ್ವಚ್ಛ ಮಂಗಳೂರು ಅಭಿಯಾನದ ಮುಖ್ಯ ಸಂಯೋಜಕ ರಂಜನ್ ಬೆಳ್ಳಂಪಾಡಿ ಮಾತನಾಡಿ, "ಸ್ವಯಂ ನಂಬಿಕೆ, ಸ್ಪಷ್ಟ ಗುರಿ ಹಾಗೂ ಸಮಾಜಕ್ಕೆ ಮರಳಿಸುವ ಮನೋವೃತ್ತಿ ಮನುಷ್ಯನನ್ನು ಶ್ರೇಷ್ಠನನ್ನಾಗಿ ಮಾಡುತ್ತದೆ," ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, "ವೇಗವಾಗಿ ಬದಲಾಗುತ್ತಿರುವ ಇಂದಿನ ಜಗತ್ತಿನಲ್ಲಿ ವಾಣಿಜ್ಯ, ಕಲೆ ಮತ್ತು ವಿಜ್ಞಾನ ಮೂರೂ ಕ್ಷೇತ್ರಗಳಿಗೆ ಸಮಾನ ಅವಕಾಶಗಳಿವೆ. ಪ್ರತಿಯೊಂದು ಪದವಿಯೂ ತನ್ನದೇ ಆದ ಮಹತ್ವವನ್ನು ಹೊಂದಿದ್ದು, ಸಮಾಜದ ಅಭಿವೃದ್ಧಿಗೆ ಪೂರಕವಾಗಿದೆ," ಎಂದು ತಿಳಿಸಿದರು.
ಆಳ್ವಾಸ್ ಪಿಯು ಕಾಲೇಜಿನ ಪ್ರಾಂಶುಪಾಲ ಪ್ರೊ. ಮೊಹಮ್ಮದ್ ಸದಾಕಾತ್, ಉಪ ಪ್ರಾಂಶುಪಾಲೆ ಜಾನ್ಸಿ ಪಿ.ಎನ್., ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್ ಎಂ.ಡಿ., ಕಲಾ ವಿಭಾಗದ ಡೀನ್ ವೇಣುಗೋಪಾಲ್ ಶೆಟ್ಟಿ ಹಾಗೂ ಸಾಂಸ್ಕೃತಿಕ ಸಮಿತಿಯ ಸಂಯೋಜಕರು ಉಪಸ್ಥಿತರಿದ್ದರು.
ಉಪನ್ಯಾಸಕಿ ರಶ್ಮಿನ್ ತನ್ವೀರ್ ಕಾರ್ಯಕ್ರಮ ನಿರೂಪಿಸಿದರು, ಪೂರ್ಣಿಮಾ ಸ್ವಾಗತಿಸಿದರು.
