ಐಶ್ವಯ೯ದ ಬೆನ್ನು ಹತ್ತದೆ ಸಂತ್ರಪ್ತದ ಜೀವನಕ್ಕೆ ಒತ್ತು ನೀಡಿ: ಡಾ. ಎಂ. ವೀರಪ್ಪ ಮೊಯಿಲಿ
ಅವರು ಕಲ್ಲಬೆಟ್ಟು ನ್ಯೂ ವೈಬ್ರೆಂಟ್ ಪಿಯು ಕಾಲೇಜಿನಲ್ಲಿ ಶುಕ್ರವಾರ ನಡೆದ ವೈಬ್ರೆಂಟ್ ಡೇ 2025ನ್ನು ಉದ್ಘಾಟಿಸಿ ಮಾತನಾಡಿದರು.
ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಉದ್ಯಮಿಗಳಾದ ಕೆ. ಶ್ರೀಪತಿ ಭಟ್, ಅಮರೇಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.
ವಿಜ್ಞಾನ ಕ್ಷೇತ್ರದಲ್ಲಿ ಮಹೋನ್ನತ ಸಾಧನೆಗೈದ ಎನ್ಐಟಿಕೆಯ ಪ್ರಾಧ್ಯಾಪಕ ಡಾ. ಎಂ. ಎನ್. ಸತ್ಯನಾರಾಯಣ ಅವರಿಗೆ ‘ವೈಬ್ರೆಂಟ್ ವಿಜ್ಞಾನ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಟ್ರಸ್ಟಿ ಶೇಕ್ ಮೆಹಬೂಬ್ ಭಾಷಾ ಅಧ್ಯಕ್ಷತೆ ವಹಿಸಿದ್ದರು. ಟ್ರಸ್ಟಿ, ಪ್ರಾಂಶುಪಾಲ ಡಾ. ಎಸ್. ಎಸ್. ವೆಂಕಟೇಶ ನಾಯಕ್ ಶೈಕ್ಷಣಿಕ ಸಾಧನೆಗಳ ಕುರಿತು ಮಾಹಿತಿ ನೀಡಿದರು.
ವೇದಿಕೆಯಲ್ಲಿ ಟ್ರಸ್ಟಿಗಳಾದ ಚಂದ್ರರಾಜೇ ಅರಸ್, ಯೋಗೀಶ್ ಬೆಡೇಕರ್, ಸುಭಾಷ್ ಕೆ. ಝಾ, ಡಾ. ಶರತ್ ಗೋರೆ ಉಪಸ್ಥಿತರಿದ್ದರು.
ಆಡಳಿತಾಧಿಕಾರಿ ಅರುಣ್ ಡಿಸಿಲ್ವ ಸ್ವಾಗತಿಸಿದರು. ಉಪಪ್ರಾಂಶುಪಾಲೆ ಡಾ. ರಶ್ಮಿ ಅರಸ್ ವಂದಿಸಿದರು. ಉಪನ್ಯಾಸಕ ನಿಕೇತ್ ಮೋಹನದಾಸ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.
ನಂತರ ವಿದ್ಯಾಥಿ೯ಗಳಿಂದ ಸಾಂಸ್ಕೃತಿಕ ಕಾಯ೯ಕ್ರಮಗಳು ನಡೆದವು.
ಸಭಾ ಕಾಯ೯ಕ್ರಮದ ಮೊದಲು 150 ವಿದ್ಯಾಥಿ೯ಗಳು "ವಂದೇ ಮಾತರಂ"ಗೀತೆ ಹಾಡಿದರು.
