ವಿದ್ಯುತ್ ಸ್ಪರ್ಶಗೊಂಡಿದ್ದ ಗಾಯಾಳು ಮೃತ್ಯು
Saturday, January 10, 2026
ಬಂಟ್ವಾಳ: ಟ್ರಾನ್ಸ್ ಫಾರ್ಮರ್ ಮೇಲೆ ಹತ್ತಿ ವಿದ್ಯುತ್ ತಂತಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಕೆಳಗೆ ಬಿದ್ದು ಗಂಭೀರ ಗಾಯಗೊಂಡ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಸಜಿಪನಡು ಗ್ರಾಮದ ನಿವಾಸಿ ಎಸ್.ಕೆ. ಅಬ್ದುಲ್ ರಹಿಮಾನ್ ಮೃತಪಟ್ಟವರೆಂದು ಗುರುತಿಸಲಾಗಿದೆ.
ಡಿ.5 ರಂದು ಸಜಿಪನಡು ಗ್ರಾಮದ ಕಂಚಿನ ಕೊದಂಟಿ ರಸ್ತೆಯ ಬದಿಯಲ್ಲಿರುವ ಟ್ರಾನ್ ಫಾರ್ಮರ್ ಮೇಲೆ ಹತ್ತಿ ವಿದ್ಯುತ್ ತಂತಿಯ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ಕೆಳಗೆ ಬಿದ್ದು ಗಾಯಗೊಂಡಿದ್ದರು.
ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಜೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಮೃತ ಪುತ್ರ ಯೂಸುಫ್ ಅಸೀನ್ ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.